ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಪೊಲೀಸರ ಘರ್ಜನೆಗೆ ರೌಡಿಗಳು ಗಡಗಡ !

Date:

ಮಾ.26ರಂದು ರಾತ್ರಿ 7.30ರ ಸಮಯದಲ್ಲಿ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯ ಲಗ್ಗೆರೆಯ ಮುನೇಶ್ವರ ಬ್ಲಾಕ್‍ನಲ್ಲಿರುವ ಸರ್ಕಾರಿ ಆಟದ ಮೈದಾನದಲ್ಲಿ ಸಂತೋಷ್ ಮತ್ತು ಆತನ ಸ್ನೇಹಿತರು ಆಟವಾಡಿ ಕುಳಿತಿದ್ದರು. ಆ ಸಂದರ್ಭದಲ್ಲಿ ನಾಲ್ವರು ದುಷ್ಕರ್ಮಿಗಳು ಏಕಾಏಕಿ ಸಂತೋಷ್ ಮತ್ತು ಸ್ನೇಹಿತ ಸಂದೀಪ್ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಈ ಬಗ್ಗೆ ನಂದಿನಿ ಲೇಔಟ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರಿಗೆ ಮುನಿರಾಜು ಅಲಿಯಾಸ್ ಮುನ್ನ ಮತ್ತು ಆತನ ಸಹಚರರು ಭಾಗಿಯಾಗಿರುವುದು ತಿಳಿದುಬಂದಿದೆ.

ಈ ಮಾಹಿತಿ ಆಧಾರದ ಮೇಲೆ ನಂದಿನಿ ಲೇಔಟ್ ಠಾಣೆ ಇನ್ಸ್‍ಪೆಕ್ಟರ್ ಲೋಹಿತ್, ಸಬ್‍ಇನ್ಸ್‍ಪೆಕ್ಟರ್ ಕುಮಾರ್, ಕಾನ್ಸ್‍ಟೆಬಲ್ ಬಸವರಾಜ್ ಮತ್ತು ಸಿಬ್ಬಂದಿ ವರ್ಗ ಕಾರ್ಯಾಚರಣೆ ಕೈಗೊಂಡಾಗ ಆರೋಪಿ ಮುನಿರಾಜ ಕೂಲಿ ನಗರದ ಪಕ್ಕದಲ್ಲಿರುವ ಬುದ್ಧ ನಗರದಲ್ಲಿರುವುದನ್ನು ಖಚಿತಪಡಿಸಿಕೊಂಡಿದೆ.

ಈ ಮಾಹಿತಿ ಆಧಾರದ ಮೇಲೆ ಇಂದು ಮುಂಜಾನೆ 6 ಗಂಟೆ ಸಮಯದಲ್ಲಿ ಈ ತಂಡ ಬಂಧಿಸಲು ಹೋದಾಗ ಆರೋಪಿ ಮುನಿರಾಜ ಕಾನ್ಸ್‍ಟೆಬಲ್ ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ತಕ್ಷಣ ಇನ್ಸ್‍ಪೆಕ್ಟರ್ ಲೋಹಿತ್ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದರೂ ಕೂಡ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾಗಿದ್ದಾನೆ.

Share post:

Subscribe

spot_imgspot_img

Popular

More like this
Related

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ! ಬೆಂಗಳೂರು:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಜಾಗತಿಕವಾಗಿ...

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಭಾರತದಲ್ಲಿ ಪವಿತ್ರವೆಂದು ಪರಿಗಣಿಸಲ್ಪಡುವ ತುಳಸಿ...

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...