ಬೆಂಗಳೂರಿನಲ್ಲಿ ಶೀಲ ಶಂಕಿಸಿ ಹೆಂಡತಿಯ ಕತ್ತು ಹಿಸುಕಿ ಕೊಲೆ!

Date:

ಬೆಂಗಳೂರಿನಲ್ಲಿ ಶೀಲ ಶಂಕಿಸಿ ಹೆಂಡತಿಯ ಕತ್ತು ಹಿಸುಕಿ ಕೊಲೆ!

ಬೆಂಗಳೂರು: ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆಂಬ ಅನುಮಾನದಿಂದ ಆಕೆಯನ್ನು ಗಂಡ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಗ್ಗಡೆ ನಗರದ 1 ನೇ ಕ್ರಾಸ್ ನಲ್ಲಿ ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಜರುಗಿದೆ. ವೇಲಾರಮಣಿ (35) ಮೃತ ದುರ್ಧೈವಿಯಾಗಿದ್ದು, ಗಂಡ ಚಂದ್ರಶೇಖರ್ ನಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.
ಕೊಲೆ ಆರೋಪಿ ಪತಿ ಚಂದ್ರಶೇಖರ್, ಕ್ಯಾಬ್ ಡ್ರೈವರ್ ಆಗಿದ್ದ. ಅಲ್ಲದೇ 11 ವರ್ಷದ ಹಿಂದೆ ವೇಲಾರಮಣಿ ಜೊತೆ ಮದುವೆಯಾಗಿದ್ದ. ಇವರ ಮದುವೆಗೆ ಸಾಕ್ಷಿ ಎಂಬಂತೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಮೃತ ಮೇಲಾರಮಣಿ, ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿದ್ದಳು ಎನ್ನಲಾಗಿದೆ. ಇನ್ನೂ ಫೋನ್ ನಲ್ಲೇ ಹೆಚ್ಚು ಮಾತನಾಡುತ್ತಿದ್ದ ಪತ್ನಿ ಮೇಲೆ ಗಂಡನಿಗೆ ಅನುಮಾನ ಮೂಡಿದೆ.
ಇದೆ ವಿಚಾರಕ್ಕೆ ನಿನ್ನೆ ಇಬ್ಬರು ಮಕ್ಕಳು ಸ್ಕೂಲಿಗೆ ಹೋದ ಮೇಲೆ ದಂಪತಿಗಳಿಬ್ಬರ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ಹೋಗಿ ಹೆಂಡ್ತಿ ಕತ್ತು ಹಿಸುಕಿ ಪತಿ ಚಂದ್ರಶೇಖರ್ ಕೊಲೆ ಮಾಡಿದ್ದಾನೆ. ಬಳಿಕ ತಾನೇ ಸಂಪಿಗೆಹಳ್ಳಿ ಠಾಣೆಗೆ ಹೋಗಿ ಆರೋಪಿ ಗಂಡ ಶರಣಾಗಿದ್ದಾನೆ. ನಂತ್ರ ಸ್ಥಳಕ್ಕೆ ತೆರಳಿದ್ದ ಸಂಪಿಗೆಹಳ್ಳಿ ಪೊಲೀಸರು, ಕೊಲೆ ಮಾಡಿದ ಸ್ಥಳ ಪರಿಶೀಲನೆ ನಡೆಸಿ ಮೃತ ದೇಹ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...