No menu items!
15.2 C
Munich
Sunday, May 24, 2026

ಬೆಂಗಳೂರಿನಲ್ಲಿ ಸಿಗರೇಟ್ ವಿಚಾರಕ್ಕೆ ಗಲಾಟೆ: ಕಾರಿನಿಂದ ಗುದ್ದಿ ಯುವಕನ ‘ಕೊಲೆ’

Must read

ಬೆಂಗಳೂರಿನಲ್ಲಿ ಸಿಗರೇಟ್ ವಿಚಾರಕ್ಕೆ ಗಲಾಟೆ: ಕಾರಿನಿಂದ ಗುದ್ದಿ ಯುವಕನ ‘ಕೊಲೆ’

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಿಗರೇಟ್ ವಿಚಾರಕ್ಕೆ ಗಲಾಟೆ ನಡೆದು, ಕಾರಿನಿಂದ ಗುದ್ದಿ ಯುವಕನನ್ನು ಕೊಂದಿರುವ ಘಟನೆ ಕೋಣನಕುಂಟೆ ಕ್ರಾಸ್,ಕನಕಪುರ ರಸ್ತೆ ತಿರುವಿನ ಬಳಿ ನಡೆದಿದೆ. ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿಯಾಗಿದ್ದು, ಪ್ರತೀಕ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಸಂಜಯ್ ಹಾಗೂ ಚೇತನ್ ಎನ್ನುವ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳು ಆಗಿದ್ದಾರೆ. ಇವರು ವರ್ಕ್ ಫ್ರಮ್ ಹೋಂ ಕೆಲಸ ಮಾಡಿ‌ ಟೀ ಕುಡಿಯಲು ಮೇ 10 ರಂದು ಬೆಳಗಿನ ಜಾವ 4 ಗಂಟೆಗೆ ಕೋಣನಕುಂಟೆ ಕ್ರಾಸ್ನಲ್ಲಿ ತಳ್ಳು ಗಾಡಿ ಬಳಿಗೆ ಬಂದಿದ್ದರು.
ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ.
ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ. ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿದ್ದ ಸುಬ್ರಹ್ಮಣ್ಯಪುರ ಠಾಣೆ ಪೊಲೀರು ಆರೋಪಿ ಪ್ರತೀಕ್ನನ್ನು ಬಂಧಿಸಿದ್ದಾರೆ.

- Advertisement -spot_img

More articles

- Advertisement -spot_img

Latest article