ಬೆಂಗಳೂರಿನಲ್ಲಿ 19ನೇ‌ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

Date:

ಬೆಂಗಳೂರು: 19ನೇ‌ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾದವನಗರದಲ್ಲಿರುವ ಖಾಸಗಿ ಹೋಟೆಲ್‌ ವೊಂದರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಮಿಳುನಾಡು ಮೂಲದ ಶರಣ್ (28) ಎಂದು ತಿಳಿದುಬಂದಿದೆ. ಈತ ಭಾನುವಾರ ಹೋಟೆಲ್‌ಗೆ ಬಂದು ಚೆಕ್ ಇನ್ ಆಗಿದ್ದು, ಬ್ಯುಸಿನೆಸ್ ವಿಚಾರವಾಗಿ ಬಂದಿರುವುದಾಗಿ ರಿಸೆಪ್ಷನ್ ಬುಕ್‌ನಲ್ಲಿ ಎಂಟ್ರಿ ಮಾಡಿದ್ದ. ಈ ಹಿಂದೆ ಕೂಡ ಈತ ಹೋಟೆಲ್‌ಗೆ ಬಂದು ಉಳಿದುಕೊಂಡಿದ್ದ. ಈ ಬಾರಿ ಎರಡು ದಿನ ಉಳಿಯೋದಾಗಿ ಹೋಟೆಲ್ ಸಿಬ್ಬಂದಿಗೆ ಹೇಳಿದ ಈತ,
ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ 19ನೇ ಫ್ಲೋರ್‌ನ ಬಾಲ್ಕನಿಗೆ ಬಂದು ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಅರ್ಧಗಂಟೆಗೂ ಮೊದಲು ಈತ ತನ್ನ ರೂಮಿನಿಂದ ಹೊರಗೆ ಬಂದು ಬಾಲ್ಕನಿಯಲ್ಲಿ ಕುಳಿತಿದ್ದು, ಆತ್ಮಹತ್ಯೆ ಮಾಡಿಕೊಳ್ಳಬೇಕೋ ಬೇಡವೋ ಎಂದು ಯೋಚಿಸಿದ್ದ ಎಂದು ಶಂಕಿಸಲಾಗಿದೆ. ಕೊನೆಗೆ 19ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...