ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುವವರ ಜೇಬಿಗೆ ಕತ್ತರಿ

Date:

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಇದೇ ವೇಳೆ ಜನರ ಮೇಲೆ ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್‌ ವೇ ಪ್ರೈವೇಟ್ ಲಿಮಿಟೆಡ್ ಮತ್ತೊಂದು ಬರೆ ಹಾಕಿದೆ.

ಮಂಗಳವಾರ ಮಧ್ಯರಾತ್ರಿಯಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ- 75ರ ಟೋಲ್ ದರವನ್ನು ಹೆಚ್ಚಳ ಮಾಡಿರುವುದು ವಾಹನ ಸವಾರರ ಸಿಟ್ಟಿಗೆ ಕಾರಣವಾಗಿದೆ. ಬೆಂಗಳೂರು ನಗರ ಹೊರವಲಯದ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ಇರುವ ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್‌ ವೇ ಪ್ರೈವೇಟ್ ಲಿಮಿಟೆಡ್ ಟೋಲ್‌ನಲ್ಲಿ, ಲಘು ವಾಹನಗಳನ್ನು ಹೊರತುಪಡಿಸಿ ಭಾರೀ ಗಾತ್ರದ ವಾಹನಗಳ ಟೋಲ್ ದರ ಮಂಗಳವಾರ ಮಧ್ಯ ರಾತ್ರಿಯಿಂದಲೇ ಹೆಚ್ಚಳವಾಗಿದೆ.

ಲಾರಿ, ಬಸ್‌ಗಳಿಗೆ ಸೇರಿದಂತೆ ಹಳೆಯ ದರ ಏಕಮುಖ ಸಂಚಾರ 160 ರೂ. ಮತ್ತು ದ್ವಿಮುಖ ಸಂಚಾರಕ್ಕೆ 240 ರೂಪಾಯಿ ಇತ್ತು. ಈಗಿನ ಹೊಸದರದಲ್ಲಿ ಏಕಮುಖ ಸಂಚಾರಕ್ಕೆ 160 ರೂ., ದ್ವಿಮುಖ ಸಂಚಾರಕ್ಕೆ 245 ರೂ ಇದೆ. ದ್ವಿಮುಖ ಸಂಚಾರದಲ್ಲಿ 5 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹಳೆಯ ದರ ಏಕಮುಖ ಸಂಚಾರಕ್ಕೆ 255 ರೂ., ದ್ವಿಮುಖ ಸಂಚಾರಕ್ಕೆ ಹಳೆ ದರ 385 ರೂ. ಇತ್ತು. ಈಗ ಹೊಸ ದರದಲ್ಲಿ ಏಕಮುಖ ಸಂಚಾರಕ್ಕೆ 260 ರೂ. ಆಗಿದ್ದು 5 ರೂಪಾಯಿ ಹೆಚ್ಚಳವಾದರೆ, ದ್ವಿಮುಖ ಸಂಚಾರದಲ್ಲಿ 390 ರೂಪಾಯಿ ಇದ್ದು, ಇಲ್ಲಿಯೂ ಸಹ 5 ರೂಪಾಯಿ ಹೆಚ್ಚಳವಾಗಿದೆ ಎಂದು ದೇವಿಹಳ್ಳಿ ಟೋಲ್‌ನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...