ಬೆಂಗಳೂರಿನ ಕೋರ್ಟ್‍ನಲ್ಲಿ ಇಂದು ರಾಹುಲ್ ಗಾಂಧಿ ವಿಚಾರಣೆ!

Date:

ಬೆಂಗಳೂರು: ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರ್ಟ್‍ನಲ್ಲಿ ರಾಹುಲ್ ಗಾಂಧಿ ವಿಚಾರಣೆ ಎದುರಿಸಲಿದ್ದಾರೆ. ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿಯವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು
ಈ ಹಿಂದೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೋರ್ಟ್ ಹಾಜರಾಗಿದ್ದರು. ಆದರೆ ರಾಹುಲ್ ಗಾಂಧಿಯವರು ಗೈರಾಗಿದ್ದರು.
ವಿಚಾರಣೆಯ ಸಂದರ್ಭದಲ್ಲಿ ಗಾಂಧಿ ಪರ ವಕೀಲರು ಐ.ಎನ್.ಡಿ.ಐ.ಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿರುವುದರಿಂದ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಮನವಿಯನ್ನು ನಿರಾಕರಿಸಿತ್ತು. ಮಧ್ಯಾಹ್ನದ ವಿಚಾರಣೆಯನ್ನು ಮುಂದೂಡಿ ನಂತರ ಜೂನ್ 7 ರಂದು ಖುದ್ದು ಹಾಜರಾಗಬೇಕೆಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿತ್ತು.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...