ಬೆಂಗಳೂರು:ಕೊರೊನಾದಿಂದ ಗುಣಮುಖರಾದವರಲ್ಲಿ ಹೊಸ ಸೋಂಕು ಪತ್ತೆ!

Date:

ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಸೈಟೊಮೆಗಾಲೋವೈರಸ್(ಸಿವಿಎಂ) ಸಮಸ್ಯೆಗಳು ಕಾಣಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸೈಟೊಮೆಗಾಲೋವೈರಸ್ ವೈರಲ್ ಸೋಂಕಾಗಿದ್ದು, ಕೊರೊನಾ ಸೋಂಕಿನಿಂದ ಗುಣಮುಖರಾದವರನ್ನು ಪೀಡಿಸುತ್ತಿದೆ. ಸ್ಟೀರಾಯ್ಡ್ ಚಿಕಿತ್ಸೆ ಪಡೆದವರಿಗೆ ಈ ಸೋಂಕು ಕಾಡುತ್ತಿದೆ.
ಬೆಂಗಳೂರಿನಲ್ಲಿ ಇಂತಹ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿದೆ. ದೆಹಲಿಯಲ್ಲೂ ಕೂಡ ಇಂತಹ ಪ್ರಕರಣಗಳು ಪತ್ತೆಯಾಗಿದ್ದವು.


ಇದು ಹೊಸ ಮಾದರಿಯ ಆರೋಗ್ಯ ಸಮಸ್ಯೆಯಾಗಿದೆ. ಗುದನಾಳದ ರಕ್ತಸ್ರಾವದ ಬಗ್ಗೆ ಕೆಲವು ರೋಗಿಗಳು ಮೊದಲು ದೂರು ನೀಡಿದ್ದರು, ಪರೀಕ್ಷೆ ಬಳಿಕ ಇದು ಸೈಟೊಮೆಗಾಲೋವೈರಸ್ ಎಂಬುದು ತಿಳಿದುಬಂದಿದೆ.
ಏಪ್ರಿಲ್-ಮೇ ತಿಂಗಳಿನಲ್ಲಿ ಪತ್ತೆಯಾದ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯಲ್ಲಿ ಸೋಂಕು ತಗುಲಿರುವ ರೋಗಿಗಳಲ್ಲಿ ಈ ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ.
ಕೊವಿಡ್-19 ಸೋಂಕು ತಗುಲಿದ 20 ರಿಂದ 30 ದಿನಗಳಲ್ಲಿ ಪ್ರತಿಕಾಯ ವ್ಯವಸ್ಥೆಯಲ್ಲಿ ಸಮಸ್ಯೆ, ಹೊಟ್ಟೆ ನೋವು ಹಾಗೂ ಗುದನಾಳದಲ್ಲಿ ರಕ್ತಸ್ರಾವ ಆಗುತ್ತಿರುವುದು ಗೊತ್ತಾಗಿದೆ.
ಇಬ್ಬರು ರೋಗಿಗಳಲ್ಲಿ ತೀವ್ರ ರಕ್ತಸ್ರಾವ ಆಗುತ್ತಿದ್ದ ಹಿನ್ನೆಲೆ ಶಸ್ತ್ರಚಿಕಿತ್ಸೆ ನೀಡಲಾಯಿತು. ಅದಾಗ್ಯೂ, ಒಬ್ಬ ರೋಗಿಯು ಎದೆನೋವು ಹಾಗೂ ತೀವ್ರ ರಕ್ತಸ್ರಾವದಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...