ಬೆಂಗಳೂರು ಅಭಿವೃದ್ಧಿ ಬಗ್ಗೆ ಪ್ರಧಾನಮಂತ್ರಿಗಳ ಜತೆ ಚರ್ಚೆ: ಡಿ.ಕೆ. ಶಿವಕುಮಾರ್

Date:

 

ಬೆಂಗಳೂರು: ಪ್ರಧಾನ ಮಂತ್ರಿಗಳ ಭೇಟಿ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಹಳ ಪ್ರಮುಖವಾದ ನಗರ. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಆದಾಯ ನೀಡುತ್ತಿರುವ ನಗರ. ವಿಶ್ವದ ನಾಯಕರು ಹಾಗೂ ವಿಶ್ವದ ಹೂಡಿಕೆದಾರರು ಬೆಂಗಳೂರಿನ ಮೇಲೆ ಆಸಕ್ತಿ ಹೊಂದಿದ್ದಾರೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಅನೇಕ ಮೂಲಭೂತ ಸೌಕರ್ಯ ಯೋಜನೆಗಳನ್ನು ನೀಡಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ವಿಮಾನ ನಿಲ್ದಾಣ ಮೇಲ್ಸೇತುವೆ,
ನೆಲಮಂಗಲ ಮೇಲ್ಸೆತುವೆ ಯೋಜನೆಗಳನ್ನು ನೀಡಲಾಗಿತ್ತು. ಈಗ ಜನಸಂಖ್ಯೆ ಹೆಚ್ಚಾಗಿರುವ ಕಾರಣ ವರ್ತುಲ ರಸ್ತೆಗೆ ಮಿಲಿಟರಿ ಭೂಮಿ ಬೇಕಾಗಿದೆ. ಅದನ್ನು ದೊರಕಿಸಿಕೊಡುವಂತೆ ಮನವಿ ಮಾಡಿದ್ದೇವೆ. ಈ ವಿಚಾರವಾಗಿ ರಕ್ಷಣಾ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿದ್ದೇವೆ. ಸುರಂಗ ರಸ್ತೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಇದರ ಜತೆಗೆ ಈ ಹಿಂದೆ ಬಜೆಟ್ ನಲ್ಲಿ ಘೋಷಣೆಯಾಗಿರುವ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಮನವಿ ಪರಿಶೀಲಿಸುವುದಾಗಿ ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ...

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ....