ಬೆಂಗಳೂರು: ಗನ್ ಹಿಡಿದು ಚಿನ್ನದಂಗಡಿ ದೋಚಿದ ಖದೀಮರು

Date:

ಬೆಂಗಳೂರು: ಗನ್ ಹಿಡಿದು ಚಿನ್ನದಂಗಡಿ ದೋಚಿದ ಖದೀಮರು

ಬೆಂಗಳೂರು: ನಗರದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚೋಹಳ್ಳಿ ಗೇಟ್ ಬಳಿಯ ರಾಮ್ ಜ್ಯುವೆಲರ್ಸ್ ಅಂಗಡಿಯಲ್ಲಿ, ಗನ್ ತೋರಿಸಿ ಚಿನ್ನಾಭರಣ ದರೋಡೆ ಮಾಡಿದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಸಮಯ ಸುಮಾರು ರಾತ್ರಿ 8:30ರ ಸುಮಾರಿಗೆ, ಮೂವರು ಮುಸುಕುಧಾರಿಗಳು ಅಂಗಡಿಗೆ ನುಗ್ಗಿದ್ದು, ಅಂಗಡಿ ಮುಚ್ಚುವ ತಯಾರಿಯಲ್ಲಿ ಇದ್ದ ಮಾಲೀಕ ಕನ್ನಯ್ಯಲಾಲ್ ಅವರನ್ನು ಗನ್ ತೋರಿಸಿ ಬೆದರಿಸಿದ್ದಾರೆ. ನಂತರ ಟೇಬಲ್ ಮೇಲಿದ್ದ ಚಿನ್ನಾಭರಣವನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ.

ಇನ್ನು ಕೂಗಾಟ ಕೇಳಿ ಪಕ್ಕದ ಅಂಗಡಿಯ ಹುಡುಗ ಬಂದಿದ್ದು, ಆತನನ್ನು ತಳ್ಳಿ ಕಳ್ಳರು ಎಸ್ಕೇಪ್ ಆಗಿದ್ದಾರೆ. ಕೈಗೆ ಸಿಕ್ಕ ಚಿನ್ನವನ್ನ ದೋಚಿ ಮೂವರು ದರೋಡೆಕೋರರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...