ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ

Date:

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ

ಬೆಂಗಳೂರು ನಗರದ ಬಡಾವಣೆಗಳಲ್ಲಿನ ಬಿ-ಖಾತಾ ನಿವೇಶನಗಳು, ಕಟ್ಟಡಗಳು ಹಾಗೂ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಧಿಕೃತ ಅಪಾರ್ಟ್‌ಮೆಂಟ್‌ಗಳ ಫ್ಲಾಟ್‌ಗಳಿಗೆ ಎ-ಖಾತಾ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಆದರೆ 1961ರ ಕಾಯ್ದೆಯನ್ನು ಉಲ್ಲಂಘಿಸಿ ನಿರ್ಮಿಸಿರುವ ಅಧಿಕೃತ ನಿವೇಶನ, ಕಟ್ಟಡ ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಮಾತ್ರ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಬಿ-ಖಾತಾ ಆಸ್ತಿಗಳು ಇರುವುದಾಗಿ ಅಂದಾಜಿಸಲಾಗಿದೆ. ಜಿಬಿಎ (ಬೆಂಗಳೂರು ಮಹಾನಗರ ಪ್ರದೇಶ) ವ್ಯಾಪ್ತಿಯಲ್ಲಿ ಇದುವರೆಗೆ ಜಾರಿಯಲ್ಲಿದ್ದ ನಿಯಮಗಳನ್ನೇ ಇತರೆ ಪ್ರದೇಶಗಳಿಗೂ ಅನ್ವಯಿಸಲು ಸರ್ಕಾರ ನಿರ್ಧರಿಸಿದೆ. ಒತ್ತುವರಿ ಹಾಗೂ ನಿಯಮ ಉಲ್ಲಂಘನೆಯ ಪ್ರಮಾಣದ ಆಧಾರದ ಮೇಲೆ ದಂಡದ ಮೊತ್ತವನ್ನು ನಿಗದಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಎ-ಖಾತಾ ಪಡೆಯಲು ಮಾನದಂಡಗಳು
ಸರ್ಕಾರ ನಿಗದಿಪಡಿಸಿರುವ ನಿಯಮಗಳ ಪ್ರಕಾರ ಅಪಾರ್ಟ್‌ಮೆಂಟ್‌ಗಳಿಗೆ ಎ-ಖಾತಾ ಪಡೆಯಲು ಈ ಕೆಳಗಿನ ಷರತ್ತುಗಳನ್ನು ಪೂರೈಸಬೇಕು:
ಈ ವರ್ಷದ ಆಸ್ತಿ ತೆರಿಗೆ ಪಾವತಿಸಿರಬೇಕು
ಅಪಾರ್ಟ್‌ಮೆಂಟ್‌ಗೆ ಮಾನ್ಯವಾದ ನಕ್ಷೆ ಇರಬೇಕು
ಸರ್ಕಾರ ಸೂಚಿಸಿದ ಮಾರ್ಗಸೂಚಿ ದರದ ಶೇಕಡಾ 5ರಷ್ಟು ಶುಲ್ಕ ಪಾವತಿಸಬೇಕು
ಅಪಾರ್ಟ್‌ಮೆಂಟ್ ಇರುವ ಭೂಮಿಗೆ ಬಿ-ಖಾತಾ ಇರಬೇಕು
ಅಪಾರ್ಟ್‌ಮೆಂಟ್ ಮಾಲೀಕರು ವೈಯಕ್ತಿಕವಾಗಿ ಇ-ಖಾತಾಗೆ ಅರ್ಜಿ ಸಲ್ಲಿಸಬೇಕು
ನಕ್ಷೆ ಮೀರಿ ಕಟ್ಟಡ ನಿರ್ಮಾಣ ಮಾಡಿದ್ದಲ್ಲಿ ಮಾರ್ಗಸೂಚಿ ಬೆಲೆಯ ಶೇಕಡಾ 50ರಷ್ಟು ದಂಡ ಪಾವತಿಸಬೇಕು
ಆನ್‌ಲೈನ್ ಮೂಲಕ ಇ-ಖಾತಾಗೆ ಅರ್ಜಿ ಸಲ್ಲಿಸಲು ಅವಕಾಶ
ಸಲ್ಲಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದ ಬಳಿಕ ಖಾತಾ ವಿತರಣೆ
ಸರ್ಕಾರದ ಕ್ರಮಕ್ಕೆ ವಿರೋಧ
ಇದೀಗ ಎ-ಖಾತಾಗೆ ಪರಿವರ್ತನೆ ಪ್ರಕ್ರಿಯೆಯನ್ನು ಸರ್ಕಾರ ಕೇವಲ ತನ್ನ ಆದಾಯ ಹೆಚ್ಚಿಸುವ ಉದ್ದೇಶದಿಂದಲೇ ಜಾರಿಗೊಳಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಕ್ರಮ ಕಾನೂನುಬದ್ಧವಾಗಿಲ್ಲ ಹಾಗೂ ಜನರನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಹಲವು ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದೆ.
ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಲಾಭ?
ಒಟ್ಟಿನಲ್ಲಿ ರಾಜ್ಯದಲ್ಲಿನ ಇ-ಖಾತಾ ವ್ಯಾಪ್ತಿಯ ಅನೇಕ ಸ್ವತ್ತುಗಳಿಗೆ ಎ-ಖಾತಾ ಸೌಲಭ್ಯ ದೊರೆಯುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಆದರೆ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಎ-ಖಾತಾ ನೀಡುವ ಭರವಸೆ ನೀಡಿ, ಅದರ ಮೂಲಕ ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಮುಂದಾಗಿದೆ ಎಂಬ ಚರ್ಚೆ ಜೋರಾಗಿದೆ.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು: ದ್ವೇಷ ಭಾಷಣ...

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ? ನಮ್ಮ ದೇಹಕ್ಕೆ ನೀರು...

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್ ಮಂಗಳೂರು:...