ಬೆನ್ನುನೋವಿನಿಂದ ಬಳಲ್ತಿರೋ ದಾಸನಿಗೆ ಇಂದಾದ್ರೂ ಸಿಗುತ್ತಾ ಜಾಮೀನು..?

tnit editors
1 Min Read

ಬೆನ್ನುನೋವಿನಿಂದ ಬಳಲ್ತಿರೋ ದಾಸನಿಗೆ ಇಂದಾದ್ರೂ ಸಿಗುತ್ತಾ ಜಾಮೀನು..?

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ದರ್ಶನ್, ಪವಿತ್ರಾ ಮತ್ತು ಇತರೆ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಬೇಲ್ ಭವಿಷ್ಯ ನಿರ್ಧಾರ ಆಗಲಿದೆ.
ಇನ್ನು ವಿನಯ್, ರವಿಶಂಕರ್, ನಾಗರಾಜ್ ಹಾಗೂ ಲಕ್ಷ್ಮಣ್, ದೀಪಕ್ ಹಾಗೂ ಅನುಕುಮಾರ್ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದು ನಡೆಯಲಿದ್ದು, ಡೆವಿಲ್ ಗ್ಯಾಂಗ್ಗೆ ಇಂದಾದರೂ ಜಾಮೀನು ಸಿಗತ್ತಾ ಕಾದು ನೋಡಬೇಕಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆಯಲಿದೆ. ಹೀಗಾಗಿ ನಟ ದರ್ಶನ್ ಅವರ ಜಾಮೀನು ಭವಿಷ್ಯ ಏನಾಗಲಿದೆ ಕಾದು ನೋಡಬೇಕಾಗಿದೆ.

Share This Article