ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿರೋದು: ಸಚಿವ ಜಿ ಪರಮೇಶ್ವರ್!

Date:

ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿರೋದು: ಸಚಿವ ಜಿ ಪರಮೇಶ್ವರ್!

ಬೆಂಗಳೂರು:- ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿರೋದು ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 5 ಜನರನ್ನು ಬಂಧನ ಮಾಡಲಾಗಿದೆ. ಅಲ್ಲದೇ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ಕೊಟ್ಟಿರಲಿಲ್ಲ ಎಂದು ತಿಳಿಸಿದರು. ಈಗ ದೂರು ನೀಡಿದ್ದು ದೂರು ಆಧರಿಸಿ ಈಗಾಗಲೇ ಐದು ಜನರನ್ನ ಬಂಧನ ಮಾಡಲಾಗಿದೆ. ಬೆಳಗಾವಿ ಕಮಿಷನರ್‌ಗೆ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಇನ್ನೂ ತಾಂತ್ರಿಕ ಸಮಿತಿ ವರದಿ ಆಧರಿಸಿ ಹೇಮಾವತಿ ಕೆನಾಲ್ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ್ದೇವೆ. ಈಗ ಬಿಜೆಪಿ ಶಾಸಕರು ಗಲಾಟೆ ಮಾಡಿಸುತ್ತಿದ್ದಾರೆ. ಹೇಮಾವತಿ ಕೆನಾಲ್ ಮಾಡುವುದಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ವರದಿ ಕೇಳಿದ್ದೆವು. ಯೋಜನೆ ಮಾಡಿ ಯಾವುದೇ ತೊಂದರೆ ಇಲ್ಲ ಎಂದು ವರದಿ ಹೇಳಿತ್ತು. ವರದಿ ಮುಂದಿಟ್ಟುಕೊಂಡು ಕೆಲಸ ಆರಂಭ ಮಾಡಲಾಗಿದೆ. ಈಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ಈಗ ನಾನು ತುಮಕೂರಿಗೆ ಹೋಗುತ್ತಿದ್ದೇನೆ. ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ. ಯಾವುದೇ ಸಮಸ್ಯೆ ಇಲ್ಲದೇ ಕೆಲಸ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಕೆನಾಲ್ ಯೋಜನೆ ವಿರುದ್ಧ ಪ್ರತಿಭಟನೆ ಮಾಡಿದ ಸ್ವಾಮೀಜಿಗಳ ಮೇಲೆ ಎಫ್‌ಐಆರ್ ದಾಖಲು ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದಕ್ಕಾಗಿಯೇ ಈಗ ತುಮಕೂರಿಗೆ ಹೊರಟಿದ್ದೇನೆ. ಅಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...