ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು..! ಪುರಸಭೆ ಸದಸ್ಯನನ್ನು ಕೊಂದಿದ್ದ ರೌಡಿ ಶೀಟರ್‌ ಅರೆಸ್ಟ್‌

Date:

 

ಆನೇಕಲ್: ಆನೇಕಲ್ ತಾಲ್ಲೂಕಿನಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಹೌದು ಪುರಸಭೆ ಸದಸ್ಯನನ್ನು ಹತ್ಯೆ ಮಾಡಿದ್ದ ರೌಡಿ ಶೀಟರ್‌ʼನನ್ನು ಅರೆಸ್ಟ್‌ ಮಾಡಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿಯಾಗಿದ್ದಾನೆ.
ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

Share post:

Subscribe

spot_imgspot_img

Popular

More like this
Related

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...