ಬೈರತಿ ಸುರೇಶ್ ಮೇಲೆ ಚಾಕುವಿನಿಂದ ಹಲ್ಲೆ..!?

admin
0 Min Read

ಬೈರತಿಯ ನಿವಾಸದಿಂದ ಹೊರಗೆ ಬರುತ್ತಿದ್ದಾಗ ಯುವಕನೊಬ್ಬ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ,    ತಮಗೆ ಪರಿಚಯವಿರುವ ಹುಡುಗನೇ ಈ ಕೃತ್ಯಕ್ಕೆ ಮುಂದಾಗಿರುವುದು ಆಶ್ಚರ್ಯ ತಂದಿದೆ. ನಮ್ಮ ಗನ್‍ಮ್ಯಾನ್‍ಗಳ ಸಹಾಯದಿಂದ ಅಪಾಯದಿಂದ ಪಾರಾಗಿದ್ದೇನೆಂದು ಸುರೇಶ್ ತಿಳಿಸಿದ್ದಾರೆ.ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ .

ಕಳೆದ ಎರಡು-ಮೂರು ದಿನಗಳಿಂದ ನಮಗೆ ಪರಿಚಯವಿರುವ ಶಿವು ಎಂಬ ಹುಡುಗ ಮನೆ ಸುತ್ತಮುತ್ತ ಅಡ್ಡಾಡುತ್ತಿದ್ದನೆಂದು ನಮ್ಮ ಸೆಕ್ಯೂರಿಟಿ ತಿಳಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಹೀಗೆ ಮಾಡಿದ್ದಾನೆಂದು ಗೊತ್ತಾಗ್ತಿಲ್ಲ ಎಂದು ಹೇಳಿದರು.ಕೊತ್ತನೂರು ಠಾಣೆ ಪೊಲೀಸರು ಆರೋಪಿ ಶಿವುನನ್ನು ವಶಕ್ಕೆ ಪಡೆದಿದ್ದಾರೆ.

Share This Article
Leave a Comment