ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಜಡ್ಡು ಮೋಡಿ – RCBಗೆ ಮೊದಲ ಸೋಲು

Date:

ಮುಂಬೈ: ರವೀಂದ್ರ ಜಡೇಜಾ ಅವರ ಆಲ್‍ರೌಂಡರ್ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 69 ರನ್‍ಗಳಿಂದ ಗೆದ್ದುಕೊಂಡಿದೆ.

ಮುಂಬೈ: ರವೀಂದ್ರ ಜಡೇಜಾ ಅವರ ಆಲ್‍ರೌಂಡರ್ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 69 ರನ್‍ಗಳಿಂದ ಗೆದ್ದುಕೊಂಡಿದೆ.

ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಜಡೇಜಾ ಇಂದು ವಾಷಿಂಗ್ಟನ್ ಸುಂದರ್ ಅವರನ್ನು ಕ್ಯಾಚ್ ಔಟ್ ಮಾಡಿದ್ದರೆ ಮ್ಯಾಕ್ಸ್ ವೆಲ್ ಮತ್ತು ಎಬಿಡಿ ವಿಲಿಯರ್ಸ್ ಅವರನ್ನು ಬೌಲ್ಡ್ ಮಾಡಿದರು. ಅಷ್ಟೇ ಅಲ್ಲದೇ ಡೇನಿಯಲ್ ಕ್ರಿಸ್ಟಿಯನ್ ಅವರನ್ನು ರನೌಟ್ ಮಾಡಿದರು. ಅಂತಿಮವಾಗಿ ಜಡೇಜಾ 4 ಓವರ್‌ಗಳ ಕೋಟಾದಲ್ಲಿ 1 ಮೇಡನ್ ಮಾಡಿ 13 ರನ್ ನೀಡಿ 4 ವಿಕೆಟ್ ಕಿತ್ತರು.

ಆರ್‍ಸಿಬಿ ಪರ ದೇವದತ್ ಪಡಿಕ್ಕಲ್ 34 ರನ್(15 ಎಸೆತ, 4 ಬೌಂಡರಿ, 2 ಸಿಕ್ಸರ್) ಹೊಡೆದರೆ ಗ್ಲೇನ್ ಮ್ಯಾಕ್ಸ್ ವೆಲ್ 22 ರನ್(15 ಎಸೆತ, 3 ಬೌಂಡರಿ), ಕೈಲೆ ಜೆಮಿಸನ್ 16 ರನ್(13 ಎಸೆತ, 1 ಬೌಂಡರಿ, 1 ಸಿಕ್ಸರ್) ಮೊಹಮ್ಮದ್ ಸಿರಾಜ್ ಔಟಾಗದೇ 12 ರನ್(14 ಎಸೆತ, 1 ಬೌಂಡರಿ) ಹೊಡೆದರು.

1 ಓವರಿನಲ್ಲಿ 37 ರನ್: ರವೀಂದ್ರ ಜಡೇಜಾ ಇಂದು ಒಂದೇ ಓವರ್‌ನಲ್ಲಿ 5 ಸಿಕ್ಸರ್ ಚಚ್ಚಿದರೆ, ಆರ್‍ಸಿಬಿಯ ಹರ್ಷಲ್ ಪಟೇಲ್ ದುಬಾರಿ ರನ್ ನೀಡಿದ ಬೌಲರ್ ಎಂಬ ಕುಖ್ಯಾತಿಗೆ ಪಾತ್ರರಾದರು.

19ನೇ ಓವರ್ ಅಂತ್ಯಕ್ಕೆ ಚೆನ್ನೈ 4 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತ್ತು. ಜಡೇಜಾ 26 ರನ್ ಗಳಿಸಿದ್ದರೆ ಧೋನಿ 2 ರನ್ ಹೊಡೆದಿದ್ದರು. ಕೊನೆಯ ಓವರ್ ಎಸೆಯಲು ಹರ್ಷಲ್ ಪಟೇಲ್ ಬಂದಿದ್ದರೆ ಜಡೇಜಾ ಸ್ಟ್ರೈಕ್‍ನಲ್ಲಿದ್ದರು.

ಮೊದಲ ಮೂರು ಎಸೆತವನ್ನು ಜಡೇಜಾ ಸಿಕ್ಸ್ ಗೆ  ಅಟ್ಟಿದರು. ಮೂರನೇ ಎಸೆತ ನೋಬಾಲ್ ಆಗಿದ್ದ ಕಾರಣ ಫ್ರಿ ಹಿಟ್ ಸಿಕ್ಕಿತು. ಈ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ 4ನೇ ಎಸೆತದಲ್ಲಿ 2 ರನ್ ಬಂತು. 5ನೇ ಎಸೆತದಲ್ಲಿ ಸಿಕ್ಸರ್ ಬಂದರೆ 6ನೇ ಎಸೆತದಲ್ಲಿ 4 ರನ್ ಬಂತು.

5 ಸಿಕ್ಸ್, 1 ಬೌಂಡರಿ, 2 ರನ್ ಹೊಡೆಯುವ ಮೂಲಕ ಜಡೇಜಾ 36 ರನ್ ಹೊಡೆದರೆ ಒಂದು ನೋಬಾಲ್ ಹಾಕಿದ ಕಾರಣ 37 ರನ್ ಬಂತು. ಈ ಹಿಂದೆ 2011ರಲ್ಲಿ ಕೊಚ್ಚಿನ್ ಟಸ್ಕರ್ಸ್ ತಂಡದ ಪರಮೇಶ್ವರನ್ ಆರ್‍ಸಿಬಿ ವಿರುದ್ಧದ ಪಂದ್ಯದಲ್ಲಿ 37 ರನ್ ನೀಡಿದ್ದರು.

5 ಸಿಕ್ಸ್, 1 ಬೌಂಡರಿ, 2 ರನ್ ಹೊಡೆಯುವ ಮೂಲಕ ಜಡೇಜಾ 36 ರನ್ ಹೊಡೆದರೆ ಒಂದು ನೋಬಾಲ್ ಹಾಕಿದ ಕಾರಣ 37 ರನ್ ಬಂತು. ಈ ಹಿಂದೆ 2011ರಲ್ಲಿ ಕೊಚ್ಚಿನ್ ಟಸ್ಕರ್ಸ್ ತಂಡದ ಪರಮೇಶ್ವರನ್ ಆರ್‍ಸಿಬಿ ವಿರುದ್ಧದ ಪಂದ್ಯದಲ್ಲಿ 37 ರನ್ ನೀಡಿದ್ದರು.

 

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...