ಬ್ಲಾಕ್ಮೇಲ್ ಮಾಡಿದವರಿಗೆ ಮಂತ್ರಿಗಿರಿ ನೀಡಲಾಗಿದೆ. ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ

Date:

ನಾಯಕತ್ವ ಬದಲಾವಣೆ ಮಾಡಲು ಹೋದವರಿಗೆ, ಬ್ಲಾಕ್ಮೇಲ್ ಮಾಡಿದವರಿಗೆ ಮಂತ್ರಿಗಿರಿ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ನಾಯಕರ ಭೇಟಿಗೆ ಸಮಯ ಕೇಳಿಲ್ಲ. ಸಿಕ್ಕ ನಾಯಕರನ್ನು ಭೇಟಿ ಮಾಡಿ ಮಾತನಾಡಿಕೊಂಡು ಬರುತ್ತೇನೆ. ನನಗೆ ಸಚಿವ ಸ್ಥಾನ ಬೇಕೆಂದು ಹೇಳಿಲ್ಲ ಎಂದು ತಿಳಿಸಿದ್ದಾರೆ.

ಸೋತವರಿಗೆ ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ವರಿಷ್ಠರ ಜೊತೆ ಮತ್ತೆ ಕೂಲಂಕುಷವಾಗಿ ಚಚಿ೯ಸುತ್ತೇನೆ.ಜಾತಿ ರಾಜಕೀಯ ಮಾಡಿ ನನಗೆ ಅಭ್ಯಾಸವಿಲ್ಲ. ಸೋತವರಿಗೆ ಸಚಿವ ಸ್ಥಾನ ನೀಡಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸವ೯ ಜನಾಂಗದ ಮತದಾರರಿಗೆ ಮಾಡಿದ ಅಪಮಾನ.
ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ಧಿಯೆ ನನ್ನ ಧ್ಯೇಯ ಎಂದು ತಮ್ಮ ಫೇಸ್ಬುಕ್ ಖಾತೆ ಯಲ್ಲಿ ರೇಣುಕಾಚಾರ್ಯ ಬರೆದುಕೊಂಡಿದ್ದಾರೆ.

ಯಡಿಯೂರಪ್ಪ, ಮೋದಿಯವರ ಮುಖ ನೋಡಿ ಜನ ಬೆಂಬಲ ನೀಡಲಾಗಿದೆ. ಯೋಗೀಶ್ವರ್ ಮುಖ ನೋಡಿ ಮುಖ ನೋಡಿ ಬೆಂಬಲ ನೀಡಿಲ್ಲ. ಪಕ್ಷಕ್ಕೆ, ಸರ್ಕಾರಕ್ಕೆ ಯೋಗೇಶ್ವರ್ ಕೊಡುಗೆ ಏನು? ಎಂದು ರೇಣುಕಾಚಾರ್ಯ ಪ್ರಶಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...