ಭಗತ್ ಸಿಂಗ್ ಅವತಾರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್..!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರುಕ್ಷೇತ್ರದ ಸುಯೋಧನನ ಪಾತ್ರದಲ್ಲಿ ನಿಮ್ಮ ಮುಂದೆ ಬರಲು ತಯಾರಾಗಿದ್ದಾರೆ. ದಚ್ಚು ಅಭಿನಯದ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ರಿಲೀಸ್​ಗೆ ಅಭಿಮಾನಿಗಳು ವ್ಹೇಟ್ ಮಾಡುತ್ತಿದ್ದಾರೆ. ಈ ನಡುವೆ ಅವರು ಭಗತ್ ಸಿಂಗ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುದ್ದಿ ಮತ್ತೊಮ್ಮೆ ಸದ್ದು ಮಾಡುತ್ತಿದೆ.
ಸಂಗೊಳ್ಳಿ ರಾಯಣ್ಣ ಆಯ್ತು, ಈ ಸುಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿರುವ ದಚ್ಚು ಮತ್ತೆ ಅಪ್ರತಿಮ ದೇಶ ಭಕ್ತ ಭಗತ್ ಸಿಂಗ್ ಜೀವನಾಧಾರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಎಂಬ ಪ್ರಶ್ನೆ ನಿಮ್ಮ ತಲೆಯಲ್ಲಿ ಬಂದಿರಬಹುದು. ಆದರೆ. ದರ್ಶನ್ ಭಗತ್ ಸಿಂಗ್ ಗೆಟಪ್​ನಲ್ಲಿ ಕಾಣಿಸಿಕೊಂಡಿರುವುದು ಡೈನಾಮಿಕ್ ಪ್ರಿನ್ಸ್​ ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್​ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ದರ್ಶನ್ ಭಗತ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಭಾವನಾ ಮೆನನ್ ನಟಿಸಿದ್ದಾರೆ. ಇನ್ಸ್​ಪೆಕ್ಟರ್ ಆಗಿ ಪ್ರಜ್ವಲ್ ಕಾಣಿಸಿಕೊಂಡಿದ್ದು, ಖಾಕಿಗೆ ಖಳನಾಗಿ ರಮೇಶ್ ಅರವಿಂದ್ ನಟಿಸಿದ್ದಾರೆ..! ಈ ಎರಡು ಪಾತ್ರಗಳ ನಡುವೆ ನಿರ್ದೇಶಕ ನರಸಿಂಹ ಟ್ವಿಸ್ಟ್ ಕೊಡುವ ಪಾತ್ರ ತಂದಿದ್ದಾರೆ..! ಅದೇ ಸ್ವಾತಂತ್ರ್ಯ ಸೇನಾನಿ ಭಗತ್ ಸಿಂಗ್ ಪಾತ್ರ..! ಅದೇ ಡಿ.ಬಾಸ್ ಕಾಣಿಸಿಕೊಂಡಿರುವ ಪಾತ್ರ..!


ಇನ್ಸ್​ಪೆಕ್ಟರ್ ವಿಕ್ರಂ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಮತ್ತೆ ದರ್ಶನ್ ಭಗತ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಸುದ್ದಿಯಾಗುತ್ತಿದೆ. ದರ್ಶನ್ ಈ ಸಿನಿಮಾದಲ್ಲಿ ನಟಿಸಿರೋ ವಿಷಯ ಈ ಹಿಂದೆನೇ ವರದಿಯಾಗಿತ್ತು. ದಸರಾಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.
ದರ್ಶನ್ ಈ ವರ್ಷ ಯಜಮಾನನಾಗಿ ಮಿಂಚಿದ್ದಾರೆ, ಕುರುಕ್ಷೇತ್ರ ರಿಲೀಸ್ ಗೆ ರೆಡಿಯಾಗಿದೆ. ರಾಬರ್ಟ್, ಒಡೆಯ ಹೀಗೆ ಸಾಲು ಸಾಲು ಸಿನಿಮಾಗಳೂ ಇವೆ. ಅವುಗಳ ನಡುವೆ ಇನ್ಸ್ಪೆಕ್ಟರ್ ವಿಕ್ರಂನಲ್ಲಿ ಅತಿಥಿ ಪಾತ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾರೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...