ಭಜರಂಗಿ ಬಿಡುಗಡೆ ದಿನವೇ ಮತ್ತೊಂದು ಚಿತ್ರ ಬಿಡುಗಡೆಗೆ ರೆಡಿ

Date:

ಅಕ್ಟೋಬರ್ 1 ರಿಂದ ಕರ್ನಾಟಕದಲ್ಲಿ ಚಿತ್ರಮಂದಿರಗಳಿಗೆ 100% ಅನುಮತಿ ನೀಡಲಾಗಿದೆ. ಇದರೊಂದಿಗೆ ಬಹಳ ದಿನಗಳಿಂದ ರಿಲೀಸ್‌ಗಾಗಿ ಕಾಯುತ್ತಿದ್ದ ಸ್ಟಾರ್ ನಟರ ಚಿತ್ರಗಳು ಒಂದೊಂದೆ ರಿಲೀಸ್ ದಿನಾಂಕ ಘೋಷಣೆ ಮಾಡ್ತಿವೆ. ಪ್ರಮುಖವಾಗಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3, ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಹಾಗೂ ದುನಿಯಾ ವಿಜಯ್ ಪ್ರಪ್ರಥಮ ಬಾರಿಗೆ ನಿರ್ದೇಶಿಸಿರುವ ಸಲಗ ಚಿತ್ರಗಳ ಬಿಡುಗಡೆ ದಿನಾಂಕದ ಮೇಲೆ ಹೆಚ್ಚು ಗಮನವಿತ್ತು. ನಿರೀಕ್ಷೆಯಂತೆ ಈ ಮೂರು ಚಿತ್ರಗಳು ರಿಲೀಸ್ ದಿನಾಂಕ ಲಾಕ್ ಮಾಡಿಕೊಂಡಿದೆ.

ದಸರಾ ಹಬ್ಬದ ಪ್ರಯುಕ್ತ ಕೋಟಿಗೊಬ್ಬ ಹಾಗೂ ಸಲಗ ಚಿತ್ರಗಳು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದ್ದು, ಅಕ್ಟೋಬರ್ ಕೊನೆಯಲ್ಲಿ ಭಜರಂಗಿ ದರ್ಶನಕ್ಕೆ ಹ್ಯಾಟ್ರಿಕ್ ಹೀರೋ ಮುಹೂರ್ತ ನಿಗದಿಪಡಿಸಿಕೊಂಡಿದ್ದಾರೆ. ಈ ನಡುವೆ ಸ್ಟಾರ್ ಸಿನಿಮಾಗಳ ನಡುವೆ ಬಿಡುಗಡೆ ದಿನಾಂಕಗಳ ಕ್ಲಾಷ್ ಆಗ್ತಿದೆ. ಒಂದೇ ದಿನ ಎರಡೆರಡು ಚಿತ್ರಗಳು ಥಿಯೇಟರ್‌ಗೆ ಲಗ್ಗೆಯಿಡುತ್ತಿದೆ. ಶಿವಣ್ಣನ ಭಜರಂಗಿ 2 ಚಿತ್ರಕ್ಕೆ ಈಗ ಮತ್ತೊಬ್ಬ ಸ್ಟಾರ್ ನಟನ ಚಿತ್ರ ಫೈಟ್ ನೀಡಲು ಮುಂದಾಗಿದೆ.

 

ಜಯಣ್ಣ-ಬೋಗೇಂದ್ರ ನಿರ್ಮಾಣದಲ್ಲಿ ತಯಾರಾಗಿರುವ ಭಜರಂಗಿ 2 ಸಿನಿಮಾ ಅಕ್ಟೋಬರ್ 29ಕ್ಕೆ ಚಿತ್ರಮಂದಿರಕ್ಕೆ ಬರಲಿದೆ. ಈ ಹಿಂದೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಆಗಸ್ಟ್ 20ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, 50% ಅನುಮತಿ ಇದ್ದ ಕಾರಣ ಬಿಡುಗಡೆಯಿಂದ ಹಿಂದಕ್ಕೆ ಸರಿದಿತ್ತು. ಈಗ ಅಕ್ಟೋಬರ್ 1 ರಿಂದ ಥಿಯೇಟರ್‌ಗಳಿಗೆ ಪೂರ್ಣ ಅನುಮತಿ ಸಿಕ್ಕಿದ್ದು, ಅದೇ ತಿಂಗಳಲ್ಲಿ ಕೊನೆಯಲ್ಲಿ ಭಜರಂಗಿ ಎಂಟ್ರಿಯಾಗಲಿದೆ.

ಶಿವಣ್ಣನ ಭಜರಂಗಿ 2 ಚಿತ್ರದೊಂದಿಗೆ ಲವ್ಲಿ ಸ್ಟಾರ್ ಪ್ರೇಮ್ ನಟನೆಯ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಚಿತ್ರವೂ ಥಿಯೇಟರ್‌ಗೆ ಬರ್ತಿದೆ. ಪ್ರೇಮ್ ಅಭಿನಯಿಸಿರುವ ಚಿತ್ರದ ರಿಲೀಸ್ ದಿನಾಂಕವೂ ಘೋಷಣೆಯಾಗಿದ್ದು, ಅಕ್ಟೋಬರ್ 29ಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಚಿತ್ರಕ್ಕೆ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರಕ್ಷಿತಾ ಕೆಡಂಬಾಡಿ ಮತ್ತು ಡಾ ರಾಜ್ ಕುಮಾರ್ ಜಾನಕಿ ರಾಮನ್ ಇಬ್ಬರು ಬಂಡವಾಳ ಹಾಕಿದ್ದಾರೆ. ಇದೊಂದು ರೋಮ್ಯಾಂಟಿಕ್ ಜಾನರ್ ಸಿನಿಮಾ ಆಗಿದ್ದು, ಈ ಚಿತ್ರದಲ್ಲಿ ಪ್ರೇಮ್ ಹಲವು ಶೇಡ್ ಗಳಲ್ಲಿ ನಟಿಸುತ್ತಿದ್ದಾರಂತೆ. ನವನಟಿ ಬ್ರಿಂದಾ ಆಚಾರ್ಯ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಲೈಫ್ ಜೊತೆ ಒಂದು ಸೆಲ್ಫಿ’ ಸಿನಿಮಾದಲ್ಲಿ ಪ್ರೇಮ್ ಕೊನಯೆದಾಗಿ ಕಾಣಿಸಿಕೊಂಡಿದ್ದರು. ‘ಯಜಮಾನ’ ಚಿತ್ರದ ಹಾಡೊಂದರಲ್ಲಿ ಅತಿಥಿ ಪಾತ್ರ ಮಾಡಿದ್ದರು.

 

 

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...