ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ದಾಳಿ ಅಂತ ಓವೈಸಿ ಒಪ್ಪಿದ್ದಾರೆ: ತೇಜಸ್ವಿ ಸೂರ್ಯ

Date:

ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ದಾಳಿ ಅಂತ ಓವೈಸಿ ಒಪ್ಪಿದ್ದಾರೆ: ತೇಜಸ್ವಿ ಸೂರ್ಯ

ಬೆಂಗಳೂರು: ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ದಾಳಿ ಅಂತ ಓವೈಸಿ ಒಪ್ಪಿದ್ದಾರೆ ಎಂದು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೂ ಪುರುಷರನ್ನು ಗುರುತಿಸಿ ಅವರ ಹೆಂಡತಿ ಮಕ್ಕಳ ಮುಂದೆ ಕೊಲೆ ಮಾಡಿದ್ದಾರೆ.
ಅವರು ಕೊಂದಿದ್ದು ಪ್ರವಾಸಿಗರಲ್ಲ, ತಾವು ಹಿಂದೂ ಎಂದಿದಕ್ಕೆ ಮಾತ್ರವೇ ಅವರನ್ನು ಕೊಂದಿದ್ದಾರೆ. ಇದು ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ದಾಳಿ ಅಂತ ಓವೈಸಿ ಒಪ್ಪಿದ್ದಾರೆ. ಬೇಸರದ ಸಂಗತಿ ಏನೆಂದರೆ ಕಾಂಗ್ರೆಸ್ ಒಪ್ಪಲು ತಯಾರಿಲ್ಲ ಎಂದರು.
ಎಂಥ ದರಿದ್ರ ಪರಿಸ್ಥಿತಿಗೆ ಈ ಸರ್ಕಾರ ಇಳಿದಿದೆ ಎಂದರೆ ಈ ಸರ್ಕಾರ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಹಣ ಘೋಷಣೆ ಮಾಡಿದೆ. ಕನಿಷ್ಠ ಮಾನವೀಯತೆ ಇದ್ದರೆ 1 ಕೋಟಿ ರೂ. ಕೊಡಬೇಕಿತ್ತು. ಪಕ್ಕದ ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾದವರಿಗೆ ಈ ಸರ್ಕಾರ 15 ಲಕ್ಷ ಹಣ ನೀಡಿದೆ. ಅದಕ್ಕೆ ಸರಿ ಸಮಾನವಾಗಿ ಆದರೂ ಹಣ ಕೊಡಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...