No menu items!
8.6 C
Munich
Wednesday, April 15, 2026

ಭಯೋತ್ಪಾದಕ ದಾಳಿಗೆ ಹಿಂದೂ-ಮುಸ್ಲಿಂ ಬಣ್ಣ ಕಟ್ಟುವುದು ಸರಿಯಲ್ಲ: ಸಚಿವ ಆರ್‌ ಬಿ ತಿಮ್ಮಾಪುರ

Must read

ಭಯೋತ್ಪಾದಕ ದಾಳಿಗೆ ಹಿಂದೂ-ಮುಸ್ಲಿಂ ಬಣ್ಣ ಕಟ್ಟುವುದು ಸರಿಯಲ್ಲ: ಸಚಿವ ಆರ್‌ ಬಿ ತಿಮ್ಮಾಪುರ

ಬಾಗಲಕೋಟೆ: ಭಯೋತ್ಪಾದಕ ದಾಳಿಗೆ ಹಿಂದೂ-ಮುಸ್ಲಿಂ ಬಣ್ಣ ಕಟ್ಟುವುದು ಸರಿಯಲ್ಲ ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವರು, ತನ್ನ ಮಗನನ್ನು ಮುಸ್ಲಿಮರೇ ರಕ್ಷಿಸಿದ್ದಾರೆಂದು ಪಲ್ಲವಿ ಅವರೇ ಹೇಳಿದ್ದಾರೆ ಎಂದಿದ್ದಾರೆ. ಗುಪ್ತಚರ ವೈಫಲ್ಯವನ್ನು ಮುಚ್ಚಿ ಹಾಕಲು, ಭಯೋತ್ಪಾದಕ ದಾಳಿಗೆ ಹಿಂದೂ-ಮುಸ್ಲಿಂ ಬಣ್ಣ ಕಟ್ಟುವುದು ಸರಿಯಲ್ಲ. ಇಂಥ ಘಟನೆಗಳನ್ನು ಚುನಾವಣೆ ದೃಷ್ಟಿಯಿಂದ ನೋಡಬಾರದು ಎಂದು ಸಚಿವರು ಹೇಳಿದ್ದಾರೆ.
ಯಾರಾದರೂ ಗುಂಡಿನ ದಾಳಿ ಮಾಡುವಾಗ ನಿಂತುಕೊಂಡು ಪ್ರಶ್ನೆ ಮಾಡುತ್ತಾರೆಯೇ? ಹಾಗೆ ಮಾಡಿರಬಹುದು ಎಂದು ಅನಿಸುತ್ತಿಲ್ಲ. ಒಂದು ವೇಳೆ ಹಾಗೆ ಮಾಡಿದ್ದರೆ ಅದು ಕ್ರೂರ ಕೃತ್ಯ ಎಂದಿದ್ದಾರೆ. ಸಚಿವರ ಹೇಳಿಕೆಗೆ ಇದೀಗ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ.
ಪಲ್ಲವಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಾಳಿಯ ಆಘಾತದಿಂದ ಮನಸು ವಿಚಲಿತಗೊಂಡು ಅವರು ಹಾಗೆ (ಮುಸ್ಲಿಮರಾ ಎಂದು ಕೇಳಿ ದಾಳಿ ಮಾಡಿದ್ದಾರೆ ಎಂಬ ಹೇಳಿಕೆ) ಹೇಳಿರಬಹುದು ಎಂದರು.

- Advertisement -spot_img

More articles

- Advertisement -spot_img

Latest article