ಭಾರತ – ಆಸ್ಟ್ರೇಲಿಯಾ 2 ನೇ ಟೆಸ್ಟ್ ಮೊದಲ ದಿನದ ಆಟದ ಬಳಿಕ ಕೊಹ್ಲಿ ಹೇಳಿದ್ದೇನು?

1
94

ಭಾರತ – ಆಸ್ಟ್ರೇಲಿಯಾ 2 ನೇ ಟೆಸ್ಟ್ ಮೊದಲ ದಿನದ ಆಟದ ಬಳಿಕ ಕೊಹ್ಲಿ ಹೇಳಿದ್ದೇನು?

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದ ಆಟದಲ್ಲಿ ಭಾರತ ಅದ್ಭುತವಾದ ಪ್ರದರ್ಶನವನ್ನು ನೀಡಿದೆ. ಆಸ್ಟ್ರೇಲಿಯಾವನ್ನು 195 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಿದ್ದು ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವಂತೆ ಮಾಡಿದೆ. ಟೀಮ್ ಇಂಡಿಯಾದ ಈ ಪ್ರದರ್ಶನಕ್ಕೆ ನಾಯಕ ವಿರಾಟ್ ಕೊಹ್ಲಿ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಮೊದಲ ದಿನ ನಮಗೆ ಶ್ರೇಷ್ಠವಾಗಿತ್ತು. ಬೌಲರ್‌ಗಳ ಕಡೆಯಿಂದ ಅದ್ಭುತವಾದ ಪ್ರದರ್ಶನ ಹಾಗೂ ಅದ್ಭುತವಾದ ಅಂತ್ಯ” ಎಂದು ವಿರಾಟ್ ಕೊಹ್ಲಿ ಟ್ವೀಟ್‌ನಲ್ಲಿ ಟೀಮ್ ಇಂಡಿಯಾದ ಪ್ರದರ್ಶನವನ್ನು ಪ್ರಶಂಸಿಸಿದ್ದಾರೆ. ವಿರಾಟ್ ಕೊಹ್ಲಿ ಟ್ವೀಟ್‌ಗೆ ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದಾರೆ.
ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಮಾತ್ರವೇ ಲಭ್ಯವಾಗಿದ್ದರು. ಆ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆಯನ್ನು ಪಡೆದುಕೊಂಡಿತ್ತಾದರೂ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಟ್ಟ ಪ್ರದರ್ಶನವನ್ನು ನೀಡಿ ಹೀನಾಯವಾಗಿ ಸೋಲು ಕಂಡಿತ್ತು.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಿತೃತ್ವದ ರಜೆಯ ಹಿನ್ನೆಲೆಯಲ್ಲಿ ತವರಿಗೆ ಮರಳಿದ್ದಾರೆ. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮ ಮುಂದಿನ ಜನವರಿ ತಿಂಗಳಿನಲ್ಲಿ ಮೊದಲ ಮಗುವಿಗೆ ಜನಮ್ ನಿಡಲಿದ್ದು ಆ ಹಿನ್ನೆಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ ತವರಿಗೆ ವಾಪಾಸಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಬೌಲಿಂಗ್ ಶ್ರೇಷ್ಠ ಪ್ರದರ್ಶನವನ್ನು ನೀಡಿದೆ. ಜಸ್ಪ್ರೀತ್ ಬೂಮ್ರಾ ನಾಲ್ಕು ವಿಕೆಟ್ ಕಿತ್ತರೆ ಆರ್ ಅಶ್ವಿನ್ ಪ್ರಮುಖ ಮೂರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಚೊಚ್ಚಲ ಪಂದ್ಯವನ್ನಾಡಿದ ಮೊಹಮ್ಮದ್ ಸಿರಾಜ 2 ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ಮಿಂಚಿದ್ದಾರೆ. ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು 36 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

ಕನ್ನಡಿಗ ರಾಹುಲ್ ಗೆ ಮತ್ತೆ ನಿರಾಸೆ..!

ಆಸ್ಟ್ರೇಲಿಯಾ ವಿರುದ್ಧ ಮೊದಲನೇ ಟೆಸ್ಟ್‌ ದ್ವಿತೀಯ ಇನಿಂಗ್ಸ್‌ನಲ್ಲಿ ಕೇವಲ 36 ರನ್‌ಗಳಿಗೆ ಸರ್ವಪತನ ಕಂಡಿದ್ದ ಭಾರತ ತಂಡ ಅಂತಿಮವಾಗಿ 8 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತ್ತು. ಮೆಲ್ಬೋರ್ನ್‌ನಲ್ಲಿ ಶನಿವಾರದಿಂದ ಆರಂಭವಾಗುವ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯಕ್ಕೆ ಟೀಮ್‌ಇಂಡಿಯಾ ಅಂತಿಮ 11 ಆಟಗಾರರನ್ನು ಪ್ರಕಟಿಸಿದ್ದು, ಶುಭಮನ್‌ ಗಿಲ್‌ ಹಾಗೂ ಮೊಹಮ್ಮದ್‌ ಸಿರಾಜ್‌ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ಒಂದು ಕಡೆ ಮೊದಲ ಹಣಾಹಣಿಯ ಹೀನಾಯ ಸೋಲು, ಮತ್ತೊಂದು ಕಡೆ ವಿರಾಟ್‌ ಕೊಹ್ಲಿ ಹಾಗೂ ಮೊಹಮ್ಮದ್‌ ಶಮಿ ಅನುಪಸ್ಥಿತಿ ಟೀಮ್‌ ಇಂಡಿಯಾಗೆ ಬಹುವಾಗಿ ಕಾಡುತ್ತಿದೆ. ಇದರ ನಡುವೆಯೂ ತಂಡದ ಜವಾಬ್ದಾರಿ ಹೊತ್ತಿರುವ ಅಜಿಂಕ್ಯ ರಹಾನೆ, ಭಾರತ ತಂಡದ ಅಂತಿಮ 11ರಲ್ಲಿ ಹಲವು ಬದಲಾವಣೆ ಮಾಡಿಕೊಂಡು ಶನಿವಾರ ಕಣಕ್ಕೆ ಇಳಿಯುತ್ತಿದ್ದಾರೆ.

ಮೊದಲ ಪಂದ್ಯದ ಹೀನಾಯ ಸೋಲಿನ ಬೆನ್ನಲ್ಲೆ ಮಾಜಿ ಆಟಗಾರರು ಮೆಲ್ಬೋರ್ನ್‌ ಟೆಸ್ಟ್‌ಗೆ ಭಾರತ ತಂಡದ ಅಂತಿಮ 11ರಲ್ಲಿ ಹಲವು ಬದಲಾವಣೆಗಳನ್ನು ಸೂಚಿಸಿದ್ದರು. ಅದರಂತೆ, ಟೀಮ್‌ ಮ್ಯಾನೇಜ್‌ಮೆಂಟ್‌ ಪೃಥ್ವಿ ಶಾ ಬದಲು ಶುಭಮನ್‌ ಗಿಲ್‌ , ಗಾಯಾಳು ಮೊಹಮ್ಮದ್ ಶಮಿ ಬದಲು ಮೊಹಮ್ಮದ್‌ ಸಿರಾಜ್‌ಗೆ ‌ಶನಿವಾರದ ಪಂದ್ಯಕ್ಕೆ ಅಂತಿಮ 11ರಲ್ಲಿ ಅವಕಾಶ ನೀಡಿದೆ. ಅಲ್ಲದೆ, ಸ್ಟಾರ್‌ ಆಲ್‌ರೌಂಡರ್‌ ರವೀಂದ್ರ ಜಡೇಜಾ ಮರಳಿದ್ದು, ವೃದ್ದಿಮಾನ್‌ ಸಹಾ ಬದಲು ರಿಷಭ್‌ ಪಂತ್‌ಗೆ ವಿಕೆಟ್‌ ಕೀಪಿಂಗ್‌ ಜವಾಬ್ದಾರಿ ನೀಡಲಾಗಿದೆ.
ಆಸ್ಟ್ರೇಲಿಯಾದಲ್ಲಿ ಸೀಮಿತ ಓವರ್‌ಗಳ ಸರಣಿಯಲ್ಲಿ ಯುವ ಬ್ಯಾಟ್ಸ್‌ಮನ್‌ ಶುಭಮನ್‌ ಗಿಲ್‌ ಉತ್ತಮ ಪ್ರದರ್ಶನ ತೋರಿದ್ದರು ಹಾಗೂ ಟೆಸ್ಟ್‌ ಸರಣಿಗೂ ಮುನ್ನ ನಡೆದಿದ್ದ ಅಭ್ಯಾಸ ಪಂದ್ಯಗಳಲ್ಲಿ ಪೃಥ್ವಿ ಶಾಗಿಂತ ಪಂಜಾಬ್‌ ಮೂಲದ ಆಟಗಾರ ಉತ್ತಮ ಬ್ಯಾಟಿಂಗ್‌ ಮಾಡಿದ್ದರು. ಅಡಿಲೇಡ್‌ ಟೆಸ್ಟ್‌ಗೆ ಅವಕಾಶ ಪಡೆದಿದ್ದ ಪೃಥ್ವಿ ಶಾ, ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಎರಡೂ ಇನಿಂಗ್ಸ್‌ಗಳಲ್ಲಿ ಮಿಚೆಲ್‌ ಸ್ಟಾರ್ಕ್‌ ಹಾಗೂ ಪ್ಯಾಟ್‌ ಕಮಿನ್ಸ್‌ಗೆ ಕ್ರಮವಾಗಿ ಕ್ಲೀನ್‌ ಬೌಲ್ಡ್‌ ಆಗಿದ್ದರು. ಈ ಹಿನ್ನೆಲೆಯಲ್ಲಿ ಗಿಲ್‌, ಬಾಕ್ಸಿಂಗ್‌ ಡೇ ಟೆಸ್ಟ್‌ಗೆ ಅವಕಾಶ ಪಡೆದುಕೊಂಡಿದ್ದು, ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.
2018-19ರ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮಯಾಂಕ್‌ ಅಗರ್ವಾಲ್‌ ಗಮನಾರ್ಹ ಪ್ರದರ್ಶನ ತೋರಿದ್ದರು. ಈ ಹಿನ್ನೆಲೆಯಲ್ಲಿ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಅಡಿಲೇಡ್‌ ಟೆಸ್ಟ್‌ನಲ್ಲಿ ಆಡಿದ್ದ ಮಯಾಂಕ್‌, ಆಸೀಸ್‌ ಬೌಲರ್‌ಗಳ ಎದುರು ತಿಣುಕಾಡಿದ್ದರು. ಆದರೂ, ಎರಡನೇ ಟೆಸ್ಟ್‌ಗೆ ಮತ್ತೊಂದು ಅವಕಾಶವನ್ನು ನಿರೀಕ್ಷೆಯಂತೆ ಕರ್ನಾಟಕದ ಬ್ಯಾಟ್ಸ್‌ಮನ್‌ ಪಡೆದುಕೊಂಡಿದ್ದಾರೆ. ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಒಂದು ತುದಿಯಲ್ಲಿ ಮಯಾಂಕ್‌ ಗಟ್ಟಿಯಾಗಿ ನಿಂತರೆ ಖಂಡಿತಾ ಭಾರತಕ್ಕೆ ಉತ್ತಮ ಆರಂಭ ದೊರೆಯಲಿದೆ.
ಡೇ-ನೈಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಚೇತೇಶ್ವರ ಪೂಜಾರ 43 ರನ್‌ ಗಳಿಸಿ ಉತ್ತಮ ಆರಂಭ ಪಡೆದುಕೊಂಡಿದ್ದರು. ಆದರೆ, ದ್ವಿತೀಯ ಇನಿಂಗ್ಸ್‌ನಲ್ಲಿ ಪ್ಯಾಟ್‌ ಕಮಿನ್ಸ್‌ಗೆ ಶೂನ್ಯಕ್ಕೆ ವಿಕೆಟ್‌ ಒಪ್ಪಿಸುವ ಮೂಲಕ ತೀವ್ರ ನಿರಾಸೆ ಮೂಡಿಸಿದ್ದರು. ಆದರೆ, ಮೊದಲ ಪಂದ್ಯದಲ್ಲಿ ಮಾಡಿದ್ದ ತಪ್ಪನ್ನು ತಿದ್ದಿಕೊಂಡ ಪೂಜಾರ ಮೆಲ್ಬೋರ್ನ್‌ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ತೋರಲು ಎದುರು ನೋಡುತ್ತಿದ್ದಾರೆ. ಈಗಾಗಲೇ ಅಭ್ಯಾಸ ಶುರು ಮಾಡಿರುವ ಅವರು ರಕ್ಷಣಾತ್ಮಕ ಆಟದ ಮೇಲೆ ಹೆಚ್ಚಿನ ಕೆಲಸ ಮಾಡುತ್ತಿದ್ದಾರೆ. ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಭಾರತಕ್ಕೆ ಪೂಜಾರ ಕೀ ಆಟಗಾರರಾಗಿದ್ದಾರೆ.
ಪಿತೃತ್ವ ರಜೆ ಪಡೆದು ತವರಿಗೆ ಮರಳಿರುವ ವಿರಾಟ್‌ ಕೊಹ್ಲಿ ಬದಲು ಇನ್ನುಳಿದ ಮೂರು ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅಜಿಂಕ್ಯ ರಹಾನೆ ಪಡೆದುಕೊಂಡಿದ್ದಾರೆ. ಅಡಿಲೇಡ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ 42 ರನ್‌ ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ ಶೂನ್ಯಕ್ಕೆ ರಹಾನೆ ಔಟ್‌ ಆಗಿದ್ದರು. ಆದರೆ, ಬಾಕ್ಸಿಂಗ್‌ ಡೇ ಟೆಸ್ಟ್‌ಗೆ ಇವರು ಫಾರ್ಮ್‌ಗೆ ಬರಲಿದ್ದಾರೆಂಬ ಭರವಸೆಯನ್ನು ಟೀಮ್‌ ಮ್ಯಾನೇಜ್‌ಮೆಂಟ್‌ ಹೊಂದಿದೆ. ಅಲ್ಲದೆ, ನಾಯಕತ್ವದ ಜತೆಗೆ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಲೇಬೇಕಾದ ಅನಿರ್ವಾಯತೆ ಇರುವುದರಿಂದ ರಹಾನೆ ಮೇಲೆ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಭಾರಿ ಒತ್ತಡವಿದೆ.
ನಿಯಮಿತ ನಾಯಕ ವಿರಾಟ್‌ ಕೊಹ್ಲಿ ಪಿತೃತ್ವ ರಜೆಯ ಮೇಲೆ ತವರಿಗೆ ಮರಳಿದ್ದು, ಅವರ ಬ್ಯಾಟಿಂಗ್‌ ನಾಲ್ಕನೇ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಆಡಿದರೆ, ಐದನೇ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಹನುಮ ವಿಹಾರಿ ಆಡಲಿದ್ದಾರೆ. ಅದ್ಭುತ ಲಯದಲ್ಲಿದ್ದ ಕೆ.ಎಲ್‌ ರಾಹುಲ್‌ ಅವರಿಗೆ ಮತ್ತೇ ನಿರಾಸೆಯಾಗಿದೆ. ರವೀಂದ್ರ ಜಡೇಜಾ ಅಂತಿಮ 11ಕ್ಕೆ ಮರಳಿದ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾಟ್ಸ್‌ಮನ್‌ಗೆ ಅವಕಾಶ ಸಿಗಲಿಲ್ಲ. ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಎರಡೂ ಇನಿಂಗ್ಸ್‌ಗಳಲ್ಲಿ ವೈಫಲ್ಯ ಅನುಭವಿಸಿದ ಹೊರತಾಗಿಯೂ ವಿಹಾರಿ ಮತ್ತೊಂದು ಅವಕಾಶವನ್ನು ಪಡೆದುಕೊಂಡಿದ್ದಾರೆ.

ಸೀಮಿತ ಓವರ್‌ಗಳ ಸರಣಿಯಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳಿಗೆ ಬೆಂಡೆತ್ತಿದ್ದ ಸ್ಟಾರ್‌ ಆಲ್‌ರೌಂಡರ್‌ ರವೀಂದ್ರ ಜಡೇಜಾ, ಮೊದಲನೇ ಟಿ20 ಪಂದ್ಯದಲ್ಲಿ ಮಿಚೆಲ್‌ ಸ್ಟಾರ್ಕ್‌ ಎಸೆತದಲ್ಲಿ ತಲೆಗೆ ಚೆಂಡು ತಗುಲಿಸಿಕೊಂಡು ಕನ್ಕಷನ್‌ಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಮೊದಲ ಟೆಸ್ಟ್‌ಗೆ ಅಲಭ್ಯರಾಗಿದ್ದರು. ಆದರೆ, ಬುಧವಾರ ನೆಟ್ಸ್‌ನಲ್ಲಿ ದೀರ್ಘಾವಧಿ ಅಭ್ಯಾಸ ನಡೆಸಿದ್ದ ಜಡೇಜಾ ಸಂಪೂರ್ಣ ಫಿಟ್‌ ಇರುವುದಾಗಿ ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅಂತಿಮ 11ಕ್ಕೆ ಅವಕಾಶವನ್ನು ಪಡೆದುಕೊಂಡಿದ್ದಾರೆ. ಜಡೇಜಾ ಅಂತಿಮ 11ಕ್ಕೆ ಬಂದಿದ್ದರಿಂದ ರಾಹುಲ್‌ ಅವಕಾಶ ವಂಚಿತರಾದರು.

 

1 COMMENT

LEAVE A REPLY

Please enter your comment!
Please enter your name here