No menu items!
18.6 C
Munich
Wednesday, April 29, 2026

ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ !

Must read

ಬೆಂಗಳೂರು: ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ.ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ‌ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಾಸ್ ಕಳಿಸಿ ಎಂದು ಕರೆ ನೀಡಿದರು.
ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ. ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.
ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಕಪ್ಪು ಹಣ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ ಕಾಳು ಯಾವುದರ ಬೆಲೆಯನ್ನೂ ಇಳಿಸಲಿಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೆಗಾ ಎಂದು ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದರು.

- Advertisement -spot_img

More articles

- Advertisement -spot_img

Latest article