No menu items!
20.9 C
Munich
Monday, May 25, 2026

ಭೀಕರ ಅಪಘಾತ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ!

Must read

ಭೀಕರ ಅಪಘಾತ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ!

ಮಂಡ್ಯ:- ಭೀಕರ ಅಪಘಾತದಲ್ಲಿ 20 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ ಆಗಿರುವ ಘಟನೆ ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಕೆಎಸ್ಆರ್ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ.

- Advertisement -spot_img

More articles

- Advertisement -spot_img

Latest article