ಭೀಮರಾವ್ ಮುರುಗೋಡ್ ಇನ್ನಿಲ್ಲ!

Date:

ಭೀಮರಾವ್​ ಮುರಗೋಡ್​ ಇನ್ನಿಲ್ಲ

ಭಾರತೀಯ ಚಿತ್ರಕಲಾ ಕ್ಷೇತ್ರದ ಮಾಣಿಕ್ಯ ಎಂದೇ ಕರೆಸಿಕೊಳ್ಳುತ್ತಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಭೀಮರಾವ್​ ಮುರಗೋಡ್​ ವಿಧಿವಶರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ್​ನವರಾದ ಭೀಮರಾವ್​ ಮುರಗೋಡ್​ ಅವರು ವಿಶ್ವ ಚಿತ್ರಕಲಾ ಕ್ಷೇತ್ರದಲ್ಲಿ ಅಪೂರಪದ ವ್ಯಕ್ತಿಯಾಗಿದ್ದರು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ 75 ವರ್ಷ ವಯಸ್ಸಿನ ಭೀಮರಾವ್​ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ದೆಹಲಿಯಲ್ಲಿ ವಾಸವಾಗಿದ್ದ ಭೀಮರಾವ್​ ಮುರಗೋಡ್​ ಭಾರತದ ಬಹುತೇಕ ಪ್ರಧಾನಮಂತ್ರಿಗಳು ಹಾಗೂ ರಾಷ್ಟ್ರಪತಿಗಳನ್ನ ಎದುರಿನಲ್ಲಿ ಕೂರಿಸಿಕೊಂಡು ಅವರ ಚಿತ್ರಗಳನ್ನ ರಚಿಸಿದ್ದರು. ಭಾರತ ದೇಶದ ದೊಡ್ಡ ದೊಡ್ಡ ಸಿನಿಮಾ ನಟರ ಭಾವಚಿತ್ರಗಳನ್ನ ಕ್ಷಣ ಮಾತ್ರದಲ್ಲಿ ರಚಿಸುತ್ತಿದ್ದರು.
ಭೀಮರಾವ್​ ಮುರಗೋಡ್​ ಅವರ ಚಿತ್ರಕಲಾ ನೈಪುಣ್ಯತೆ ಗೋಕಾಕ್​ನಿಂದ ಆರಂಭವಾಗಿ ಅಮೆರಿಕಾ ದೇಶವನ್ನೂ ತಲುಪಿತ್ತು. ಯಾಕಂದ್ರೆ, 2000ರಲ್ಲಿ ಭಾರತಕ್ಕೆ ಆಗಮಿಸಿದ್ದ ಅಮೆರಿಕಾ ಅಧ್ಯಕ್ಷ ಬಿಲ್ ಕ್ಲಿಂಟನ್​ ಅವರ ಕಲಾಕೃತಿಯನ್ನ ಭೀಮ್​ರಾವ್ ರಚಿಸಿದ್ದರು. 1978ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಅಂದಿನ ಅಮೆರಿಕಾ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಕೃತಿಯನ್ನೂ ಭೀಮರಾವ್ ರಚಿಸಿದ್ದರು. ಆ ಚಿತ್ರ ಕೃತಿಯನ್ನ ಅಂದಿನ ವಿದೇಶಾಂಗ ಸಚಿವರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರೇ ಜಿಮ್ಮಿ ಕಾರ್ಟರ್​ ಅವರಿಗೆ ಉಡುಗೊರೆಯಾಗಿ ನೀಡಿದ್ದರು. ಇನ್ನು ಮದರ್ ಥೆರೇಸಾ, ಪೋಪ್ ಜಾನ್ ಪೌಲ್-2, ಇಂದಿರಾ ಗಾಂಧಿ, ಪಂಡಿತ್ ರವಿಶಂಕರ್, ಅರುಣಾ ಅಸಫ್ ಅಲಿ, ರಾಜಾ ರಾಮಣ್ಣ, ಎಂ.ಎಫ್ ಹುಸೇನ್ ಹೀಗೆ 300ಕ್ಕೂ ಹೆಚ್ಚು ಖ್ಯಾತನಾಮರ ಚಿತ್ರ ಕೃತಿಗಳನ್ನ ಭೀಮರಾವ್ ಮುರಗೋಡ್​ ಅವರು ರಚಿಸಿದ್ದಾರೆ.
ಅಂತಾರಾಷ್ಟ್ರೀಯ ಖ್ಯಾತಿಯ ಭೀಮರಾವ್​ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪುರಸ್ಕಾರಗಳು ಸಂದಿವೆ. 75 ವರ್ಷದ ಭೀಮರಾವ್​ ಅವರು ಇಬ್ಬರು ಪುತ್ರರಾದ ಸ್ವರೂಪ್ ಮುರಗೋಡ್, ಸಾಮ್ರಾಟ್ ಗೌತಮ್ ಹಾಗೂ ಪುತ್ರಿ ಮೊನಾಲಿಸಾ ವಿನಯ್ ಮತ್ತು ಪತ್ನಿ ಶಾಲಿನಿ ಮುರಗೋಡ್ ಅವರನ್ನು ಅಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...