No menu items!
9.7 C
Munich
Saturday, September 12, 2026

ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ: ಸಚಿವ ಪರಮೇಶ್ವರ್

Must read

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರತಿಮಾ ಕೊಲೆ ಪ್ರಕರಣದಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಅದರ ಆಧಾರದಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ತನಿಖೆ ಮಾಡಿದ ಬಳಿಕ ಕೊಲೆಗೆ ಕಾರಣ ಏನು?. ಹಿಂದೆ ಮುಂದೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.ಈಗಲೇ ಏನು ಹೇಳೋಕೆ ಆಗೋದಿಲ್ಲ. ಘಟನೆ ಸಂಬಂಧ ಸಿಕ್ಕಿರೋ ಲೀಡ್ ಪ್ರಕಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದು ಬಾರಿ ಆರೋಪಿಯನ್ನ ಬಂಧನ ಮಾಡಿದ ಮೇಲೆ ಎಲ್ಲವೂ ಹೊರಗೆ ಬರಲಿದೆ ಅಂತ ತಿಳಿಸಿದರು.

- Advertisement -spot_img

More articles

- Advertisement -spot_img

Latest article