ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

Date:

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.
ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...