No menu items!
16.4 C
Munich
Tuesday, May 5, 2026

ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ !

Must read

ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾತಿ ಗಣತಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ. ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ ರಿಪೇರಿ ಮಾಡಲಾಗದಷ್ಟು ಪರಿಸ್ಥಿತಿ ದುಸ್ಥಿತಿ ತಲುಪಿದೆ. ಯಾರೇ ಅಧ್ಯಕ್ಷರಾದರು ಅದನ್ನು ರಿಪೇರಿ ಮಾಡಲಾಗದು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅರವಿಂದ್ ಲಿಂಬಾವಳಿ, ಸೋಮಣ್ಣ ಸೇರಿದಂತೆ ಹಲವರು ಅಸಮಾಧಾನ ಧ್ವನಿ ಎತ್ತಿದ್ದಾರೆ. ಧ್ವನಿ ಎತ್ತಿದವರ ಮನೆಗೆ ಹೋಗಿ ಬಂದ್ರೆ ಎಲ್ಲಾ ಸರಿ ಆಗಲ್ಲ. ಬಿಜೆಪಿ ಕಾರ್ಯಕರ್ತರು ನನ್ನ ಬಳಿ ನೋವು ಹೊರ ಹಾಕುತ್ತಿದ್ದಾರೆ. ನಮ್ಮದು ಲೀಡರ್ ಲೆಸ್ ಪಾರ್ಟಿ ಅಂತ ಅಳಲು ತೋಡಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ಬಿಜೆಪಿ ಈಡಿ ಮತ್ತು ಐಟಿ ಮೂಲಕ ರಾಜಕೀಯ ಮಾಡುತ್ತಿದೆ. ವಿಪಕ್ಷಗಳು ಇರಲೇ ಬಾರದು ಎನ್ನುವುದು ಬಿಜೆಪಿ ಚಿಂತನೆ. ಈಗ ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ಇದೆ ಎಂದರು.

- Advertisement -spot_img

More articles

- Advertisement -spot_img

Latest article