ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ!

Date:

ಮಂಗಳೂರು:- ಎಳನೀರು ಕುಡಿದು 15 ಮಂದಿ ಅಸ್ವಸ್ಥಗೊಂಡ ಘಟನೆ ಮಂಗಳೂರಿನಲ್ಲಿ ಜರುಗಿದೆ.

ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿರುವ ಐಸ್‌ಕ್ರೀಂ ಘಟಕವೊಂದರಲ್ಲಿ ಘಟನೆ ಜರುಗಿದೆ.

ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು ಮತ್ತು ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಳನೀರು ಕುಡಿದ ಬಳಿಕ ಅವರಲ್ಲಿ ವಾಂತಿ ಮತ್ತು ಭೇದಿ ಆರಂಭವಾಗಿತ್ತು. ಐಸ್‌ಕ್ರೀಂ ಘಟಕದಲ್ಲಿ ಪ್ರತಿ ಲೀಟರ್‌ಗೆ 40 ರೂ. ಬೆಲೆಯಲ್ಲಿ ಎಳನೀರು ಮಾರಾಟ ಮಾಡಲಾಗುತ್ತದೆ. ಹೀಗಾಗಿ ಈ ಪ್ರದೇಶದ ಹಲವಾರು ಜನ ಅದನ್ನು ಖರೀದಿಸುತ್ತಾರೆ.

 

ಅಸ್ವಸ್ಥರು ಮೊದಲಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ. ನಂತರ ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಮೂವರು ಒಳರೋಗಿಗಳಾಗಿ ದಾಖಲಾಗಿದ್ದರೆ, 12 ಮಂದಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಹೊರರೋಗಿ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬುಧವಾರ ವಾಟ್ಸ್ ಆ್ಯಪ್ ಮೂಲಕ ದೂರು ಸ್ವೀಕರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಆಹಾರ ಭದ್ರತಾ ಅಧಿಕಾರಿ ಐಸ್​ಕ್ರೀಂ ಘಟಕಕ್ಕೆ ಭೇಟಿ ನೀಡಿ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಗಾಗಿ ಕಾಯಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...