ಮಂಗಳೂರು: ಪೊಲೀಸ್ ಪೇದೆಯಿಂದಲೇ ಬಾಲಕಿ ಮೇಲೆ ಅತ್ಯಾಚಾರ

Date:

ಸಮನ್ಸ್ ನೀಡಲು ಒಂದು ಮನೆಗೆ ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೆಬಲ್, ಆ ಮನೆಯ ಅಪ್ರಾಪ್ತ ಬಾಲಕಿಯನ್ನೇ ಅತ್ಯಾಚಾರ ಮಾಡಿದ ಹೀನ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಬೀರಂತಡ್ಕ ಎಂಬಲ್ಲಿ ನಡೆದಿದೆ. ಕಡಬ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೆಬಲ್ ಶಿವರಾಜ್ ನಾಯಕ್, ಬಾಲಕಿಯನ್ನು ಅತ್ಯಾಚಾರ ಮಾಡಿದ ಪಾಪಿ ಪೊಲೀಸ್ ಆಗಿದ್ದಾನೆ.

ಕುಂತೂರು ಗ್ರಾಮದ ಬೀರಂತಡ್ಕ ನಿವಾಸಿಯೊಬ್ಬರ 18 ವರ್ಷದ ಹಿರಿಯ ಮಗಳು ಅಪ್ರಾಪ್ತ ಬಾಲಕಿ, ಈ ಹಿಂದಿನ ಪ್ರಕರಣದ ಸಂತ್ರಸ್ತೆಯಾಗಿದ್ದು, ಈ ಪ್ರಕರಣದ ದಾಖಲೆ ಮತ್ತು ಸಮನ್ಸ್ ನೀಡುವ ಸಲುವಾಗಿ ಕಡಬ ಠಾಣೆಯ ಪೊಲೀಸ್ ಕಾನ್ಸ್‌ಟೆಬಲ್ ಶಿವರಾಜ್ ನಾಯಕ್ ಆ ಮನೆಗೆ ಹೋಗುತ್ತಿದ್ದ.

 

ಕಳೆದ ಆರು ತಿಂಗಳುಗಳಿಂದ ಶಿವರಾಜ್ ಆ ಮನೆಗೆ ಹೋಗುತ್ತಿದ್ದು, ಈ ವೇಳೆ ಹಿರಿಮಗಳ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪ್ರಕರಣ ಮುಗಿದರೂ ಶಿವರಾಜ್ ಬೇರೆ ಬೇರೆ ಕಾರಣದ ನೆಪವೊಡ್ಡಿ ಮನೆಗೆ ‌ಬರುತ್ತಿದ್ದು, ಮನೆಯವರು ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

 

ಬಾಲಕಿ ಗರ್ಭವತಿ ಆದ ಸಂದರ್ಭದಲ್ಲಿ ಶಿವರಾಜ್ ನಾಯಕ್‌ಗೆ ಬಾಲಕಿ ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಈ ವೇಳೆ ಶಿವರಾಜ್, ನಾನು ಮದುವೆಯಾಗೋದಿಲ್ಲ, ಗರ್ಭಿಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಲು ತಗುಲುವ ವೆಚ್ಚ ಕೊಡುತ್ತೇನೆ ಎಂದು ಕೈ ತೊಳೆದುಕೊಳ್ಳಲು ಯತ್ನಿಸಿದ್ದಾನೆ.

ಈ ವಿಷಯ ಮನೆಯವರಿಗೆ ಗೊತ್ತಾಗಿ, ಮಗಳನ್ನು ಮದುವೆಯಾಗದಿದ್ದರೆ ಖರ್ಚು ಕೊಡುವುದು ಬೇಡ, ಅಬಾರ್ಷನ್ ಮಾಡಿಸುವುದೂ ಬೇಡ ಆಂತಾ ಅಘಾತಕ್ಕೊಳಗಾಗಿದ್ದಾರೆ. ಇದಾದ ಬಳಿಕ ಸೆಪ್ಟಂಬರ್ 18ರಂದು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿದ ತಾಯಿ- ಮಗಳು ಮತ್ತೆ ಮನೆಗೆ ಬಂದಿಲ್ಲ. ಬಾಲಕಿಯ ತಾಯಿ ತನ್ನ ಗಂಡನಿಗೆ ಕಾಲ್ ಮಾಡಿ, ಶಿವರಾಜ್ 35,000 ರೂಪಾಯಿಯನ್ನು ನಮಗೆ ಆನ್‌ಲೈನ್ ಮೂಲಕ ಕಳುಹಿಸಿದ್ದು, ನಾವೊಂದು ಕಡೆ ಇದ್ದೇವೆ ಅಂತಾ ಹೇಳಿದ್ದಾರೆ.

 

ಪಾಪಿ ಪೊಲೀಸ್ ಕಾನ್ಸ್‌ಟೆಬಲ್‌ನ ನೀಚ ಕೃತ್ಯಕ್ಕೆ ತನ್ನ ಕುಟುಂಬ ಬೀದಿಗೆ ಬಂದಿರುವುದರಿಂದ ಬಡ ತಂದೆ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಶಿವರಾಜ್ ತನ್ನ ಪ್ರಭಾವವನ್ನು ಬಳಸಿ ತಾಯಿ- ಮಗಳನ್ನು ಅಜ್ಞಾತ ಸ್ಥಳದಲ್ಲಿ ಇರಿಸಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬಾಲಕಿ ತಂದೆ ಕೊಟ್ಟ ದೂರಿನ ಅನ್ವರ ಕಡಬ ಠಾಣೆಯಲ್ಲಿ ಪೊಲೀಸರು ಆರೋಪಿ ಶಿವರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. 2021ರ ಮಾರ್ಚ್‌ನಿಂದ ಸಪ್ಟೆಂಬರ್ 18ರವರೆಗೆ ಬಾಲಕಿಗೆ ಅತ್ಯಾಚಾರ ಎಸಗಿರುವ ಬಗ್ಗೆ ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಪಾಪಿ ಪೊಲೀಸ್ ಕಾನ್ಸ್‌ಟೆಬಲ್ ವಿರುದ್ಧ ಫೋಸ್ಕೋ ಖಾಯಿದೆಯಡಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...