ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Date:

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಒಂದೇ ದಿನ ಗಂಡ-ಹೆಂಡತಿ ಇಬ್ಬರೂ ಸಾವನ್ನಪ್ಪಿ, ಕುಟುಂಬ ಹಾಗೂ ಗ್ರಾಮಸ್ಥರನ್ನು ಶೋಕದಲ್ಲಿ ಮುಳುಗಿಸಿದ್ದಾರೆ.
ಮೃತ ದಂಪತಿಗಳು ಬೂಕನಕೆರೆಯ ನಿಂಗರಾಜ ನಾಯ್ಕ (65) ಹಾಗೂ ಅವರ ಪತ್ನಿ ಗೌರಮ್ಮ (50) ಎಂದು ಗುರುತಿಸಲಾಗಿದೆ. ಗೌರಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ನೆನ್ನೆ (ಮಂಗಳವಾರ) ಸಾವನ್ನಪ್ಪಿದ್ದರು. ಪತ್ನಿಯ ಅಂತ್ಯಸಂಸ್ಕಾರದ ಸಿದ್ಧತೆ ನಡೆಯುತ್ತಿದ್ದ ವೇಳೆ, ದುಃಖ ತಾಳಲಾರದೆ ನಿಂಗರಾಜ ನಾಯ್ಕ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಸುಮಾರು 46 ವರ್ಷಗಳಿಂದ ಸುಖದ ದಾಂಪತ್ಯ ಜೀವನ ನಡೆಸುತ್ತಿದ್ದ ಈ ದಂಪತಿಗಳು ಸಾವಿನಲ್ಲೂ ಒಂದಾಗಿ ಎಲ್ಲರ ಹೃದಯ ಮುಟ್ಟಿದ್ದಾರೆ. ಒಂದೇ ದಿನ ತಂದೆ-ತಾಯಿ ಕಳೆದುಕೊಂಡು ಇಬ್ಬರು ಪುತ್ರರು ತೀವ್ರ ಶೋಕದಲ್ಲಿ ಮುಳುಗಿದ್ದಾರೆ. ದಂಪತಿಯ ಸಾವಿನಿಂದ ಬೂಕನಕೆರೆ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...