ಮಂಡ್ಯದಲ್ಲಿ ಯಾರ ಪರ ಪ್ರಚಾರ ಮಾಡ್ತೀರಾ ಅಂದಿದ್ದಕ್ಕೆ ಆ್ಯಕ್ಷನ್ ಪ್ರಿನ್ಸ್ ಏನಂದ್ರು?

Date:

ಮಂಡ್ಯ ಲೋಕಸಭಾ ಕ್ಷೇತ್ರದತ್ತ ಎಲ್ಲರ ಚಿತ್ತ ನೆಟ್ಟಿದೆ. ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ನಡುವೆ ಪೈಪೋಟಿ ಇರುವುದರಿಂದ ಸ್ಟಾರ್ ವಾರ್​ಗೆ ಮಂಡ್ಯ ಸಜ್ಜಾಗಿದೆ. ಚಾಲೆಂಜಿಂಗ್ ಸ್ಟಾರ್​ ದರ್ಶನ್​, ರಾಕಿಂಗ್ ಸ್ಟಾರ್ ಯಶ್​ ಸುಮಲತಾ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಹಿರಿಯ ನಟ ದೊಡ್ಡಣ್ಣ , ನಿರ್ಮಾಪಕ ರಾಕ್​ ಲೈನ್ ವೆಂಕಟೇಶ್ ಕೂಡ ಸುಮಲತಾ ಅವರಿಗೆ ಸಾಥ್ ನೀಡಿದ್ದಾರೆ.
ಇನ್ನೊಂದೆಡೆ ನಿಖಿಲ್ ಕುಮಾರಸ್ವಾಮಿ ಅವರೂ ಸಿನಿಮಾ ನಟರಾಗಿರುವುದರಿಂದ ಅವರ ಪರ ಯಾರು ಪ್ರಚಾರಕ್ಕೆ ಬರಬಹುದು ಅನ್ನೋ ಕುತೂಹಲವೂ ಇದೆ. ಆದರೆ, ಇಲ್ಲಿವರೆಗೆ ಯಾರೂ ಬಂದಿಲ್ಲ. ನಿಖಿಲ್ ನನಗೆ ಕಾರ್ಯಕರ್ತರೇ ಸೈನಿಕರು ಅಂದಿದ್ದಾರೆ.
ಈ ನಡುವೆ ದರ್ಶನ್, ಯಶ್ ಬಿಟ್ಟು ಉಳಿದ ಸ್ಟಾರ್​ಗಳು ಯಾರ ಪರ ಪ್ರಚಾರ ಮಾಡ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಹೀಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೂ ಈ ಪ್ರಶ್ನೆ ಎದುರಾಗಿತ್ತು. ಆಗ ಅವರು, ಈ ಬಗ್ಗೆ ಮಾತನಾಡೋದು ಬೇಡವೇ ಬೇಡ. ತಾವು ರಾಜಕೀಯದ ಬಗ್ಗೆ ಮಾತಾಡೋಲ್ಲ, ನನಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ನನ್ನ ರಾಜಕಾರಣಕ್ಕೆ ಎಳೀಬೇಡಿ ಎಂದರು. ಮತದಾನದ ಬಗ್ಗೆ ಮಾತ್ರ ಮಾತನಾಡಿ ಪ್ರತಿಯೊಬ್ಬರು ಓಟ್ ಹಾಕಲೇಬೇಕು, ಎಲ್ರೂ ಓಟ್ ಮಾಡಿ ಎಂದಿದ್ದಾರೆ,

Share post:

Subscribe

spot_imgspot_img

Popular

More like this
Related

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ!

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ! ಜನರು...