ಮಂಡ್ಯದಲ್ಲಿ ಶುರುವಾಯ್ತು ಹೊಸ ದಂದೆ..! ಇದಕ್ಕಾಗಿ ಬಲಿಯಾಗುತ್ತಿದೆ ಕೋಳಿ, ಕುರಿ, ಹಸು..!?

admin
1 Min Read

ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವವರು ಯಾರು? ಹೀಗೆ ದಿನದಿಂದ ದಿನಕ್ಕೆ ಎಲ್ಲರ ಕುತೂಹಲ ಹೆಚ್ಚಾಗುತ್ತಿದೆ.

ಮಂಡ್ಯದಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ ಸೋಲು-ಗೆಲುವಿನ ಕುರಿತ ಲೆಕ್ಕಾಚಾರ ಶುರುವಾಗಿದೆ. ಮಂಡ್ಯದಲ್ಲಿ ಅಭಿಮಾನಿಗಳ ನಡುವೆ ಬಿಸಿಬಿಸಿ ಚರ್ಚೆ ನಡೆಯುತ್ತಿದ್ದು, ಕೆಲವರಂತು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯೇ ಗೆಲ್ಲಬಹುದು ಬೇಕಿದ್ದರೆ ಬೆಟ್‌ ಕಟ್ಟುತ್ತೇನೆ ಅಂದ್ರೆ, ಇದಕ್ಕೆ ಪ್ರತಿ ಸವಾಲು ಹಾಕುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಬೆಂಬಲಿಗರು ಸಾಧ್ಯನೇ ಇಲ್ಲ, ಗೆಲ್ಲೋದು ಸುಮಕ್ಕನೇ ಎಂದು ಎದೆ ತಟ್ಟಿ ಹೇಳುತ್ತಿದ್ದಾರೆ

ಮತದಾನಕ್ಕೂ ಮೊದಲೇ ಇಬ್ಬರು ಅಭ್ಯರ್ಥಿಗಳಲ್ಲಿ ಯಾರು ಗೆಲ್ತಾರೆ ಎಂದು ಬೆಟ್ಟಿಂಗ್ ಆರಂಭವಾಗಿತ್ತು. ನಗದು ಮಾತ್ರವಲ್ಲದೆ, ಕುರಿ, ಕೋಳಿ, ಜೋಡೆತ್ತುಗಳು, ಹಸು ಹಾಗೂ ಕೆಲವರಂತು ಜಮೀನನ್ನೂ ಬೆಟ್ಟಿಂಗ್ ನಲ್ಲಿ ಪಣಕ್ಕಿಟ್ಟಿದ್ದಾರೆಂದು ಹೇಳಲಾಗುತ್ತಿದೆ.

Share This Article
Leave a Comment