ಮಂಡ್ಯ ಜನರಿಗೆ ರಾಕ್ ಲೈನ್ ವೆಂಕಟೇಶ್ ಇಂಥಾ ಮೋಸ ಮಾಡಿದ್ದಾರಂತೆ ಹೌದ?

Date:

ಲೋಕಸಭಾ ಚುನಾವಣೆ ಕಾವು ತಣಿದಿದೆ. ಇಂದು ಕೊನೆಯ ಹಾಗೂ 7ನೇ ಹಂತದ ಮತ ಹಬ್ಬ ನಡೆಯುತ್ತಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್ 23ಕ್ಕೆ ಮತದಾನದ ಸಡಗರ ಇತ್ತು.
ಕರ್ನಾಟಕದ 28ಲೋಕಸಭಾ ಕ್ಷೇತ್ರಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಡೆಗೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಮೈತ್ರಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಧರ್ಮಪತ್ನಿ ಸುಮಲತಾ ಅಂಬರೀಶ್ ಅವರು ಕಣದಲ್ಲಿ ಇರುವುದರಿಂದ ಆ ಕಣ ಭಾರಿ ಕುತೂಹಲವನ್ನು ಹುಟ್ಟು ಹಾಕಿದೆ.
ಮಂಡ್ಯ ಲೋಕಸಭಾ ಚುನಾವಣೆ ಎಂದೊಡನೆ ಸುಮಲತಾ ಅಂಬರೀಶ್ ಅವರ ಪರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಚುನಾವಣೆಯಲ್ಲಿ ಓಡಾಡಿದ್ದು ಖರ್ಚಿ‌ನ ಜವಬ್ದಾರಿ ಹೊತ್ತಿದ್ದು ತಿಳಿದಿದೆ. ಆದರೆ ಅವರೀಗ ಮಂಡ್ಯದ ಜನರಿಗೆ ಮೋಸ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ರಾಕ್ ಲೈನ್ ಪ್ರಚಾರಕ್ಕೆ ತಂದಿದ್ದ ವಾಹನಗಳಿಗೆ ಬಾಡಿಗೆ ಕೊಟ್ಟಿಲ್ಲ. ಫೋನ್ ಮಾಡಿದರೂ ಕರೆ ಸ್ವೀಕರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ವಾಟ್ಸ್ ಆ್ಯಪ್ ನಲ್ಲಿ ಭಾರೀ ಚರ್ಚೆಗಳಾಗುತ್ತಿವೆ. ಆದರೆ, ರಾಕ್ ಲೈನ್ ಗೆ ಈ ಎಲೆಕ್ಷನ್ ಎಲ್ಲಾ ಹೊಸದು ಎಲ್ಲಾ ಸರಿ ಆಗುತ್ತದೆ ಎಂದು ಸುಮಲತಾ ಅವರ ಬೆಂಬಲಿಗರು ಟೀಕಾಕಾರರ ಮನವೊಲಿಸುತ್ತಿದ್ದಾರೆ.
ಈ ಬಗ್ಗೆ ರಾಕ್ ಲೈನ್ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ನಿಜಕ್ಕೂ ರಾಕ್ ಲೈನ್ ವೆಂಕಟೇಶ್ ಅವರು ಬಾಡಿಗೆ ಕೊಡದೇ ವಂಚಿಸಿದ್ದಾರಾ? ಕರೆ ಸ್ವೀಕರಿಸದೆ ಸತಾಯಿಸುತ್ತಿದ್ದಾರಾ ಎನ್ನುವುದರ ಬಗ್ಗೆ ಪರ ವಿರೋಧ ಚರ್ಚೆ ಸೋಶಿಯಲ್ ಮೀಡಿಯಾದಲ್ಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...