ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆಯಾದ ಸುಹಾನಾ ಸೈಯದ್

Date:

ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆಯಾದ ಸುಹಾನಾ ಸೈಯದ್

ಸರಿಗಮಪ ಖ್ಯಾತಿಯ ಸುಹಾನಾ ಸೈಯದ್ ಮಂತ್ರ ಮಾಂಗಲ್ಯ ವಿವಾಹ ಪದ್ಧತಿ ಮೂಲಕ ಬಹುಕಾಲದ ಗೆಳೆಯ, ರಂಗಭೂಮಿ ಕಲಾವಿದ ನಿತಿನ್ ಅವರನ್ನು ಮದುವೆಯಾಗಿದ್ದಾರೆ. ರಂಗಭೂಮಿ ಕಲಾವಿದ ನಿತೀನ್ ಶಿವಾಂಶ್ ಜೊತೆ ಈ ಮದುವೆ ನೆರವೇರಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ. ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ.

ಸುಹಾನಾ ಅವರು ‘ಸರಿಗಮಪ’ ಶೋಗೆ ತೆರಳಿ ಮಿಂಚಿದರು. ಆ ಬಳಿಕ ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆ ಹೇಳಿದ್ದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಮುಸ್ಲಿಂ ಧರ್ಮದ ಅನೇಕರು ಅವರ ಈ ಕೆಲಸವನ್ನು ಖಂಡಿಸಿದರು. ಈಗ ಅವರು ಗೆಳೆಯ ನಿತೀನ್ ಜೊತೆ ವಿವಾಹ ಆಗಿದ್ದಾರೆ. ಅವರ ಮಂತ್ರ ಮಾಂಗಲ್ಯ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಗಮನ ಸೆಳೆದಿದೆ.

ಸುಹಾನಾ ಹಾಗೂ ನಿತೀನ್ 16 ವರ್ಷಗಳ ಹಿಂದೆ ಪರಿಚಯ ಆದರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಈ ಮೊದಲು ಸೋಶೀಯಲ್ ಮೀಡಿಯಾದಲ್ಲಿ ಸುಹಾನಾ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಪ್ರತಿ ಜೀವವೂ ಪ್ರೀತಿಗಾಗಿ ಹುಡುಕಾಡುತ್ತದೆ. ಪ್ರತಿ ಹೃದಯವು ಪ್ರೀತಿಗಾಗಿ ಹಾತೊರೆಯುತ್ತದೆ.

ಪ್ರೀತಿಗೆ ಯಾವುದೇ ಮಿತಿಯಿಲ್ಲ. ಅದು ದೂರ, ಅನುಮಾನಗಳು ಮತ್ತು ಭಯಗಳನ್ನು ಮೀರಿದ ಪ್ರಯಾಣ. ಆ ಅಪರಿಮಿತ ಪ್ರೀತಿಗೆ ನಾವು ಸಾಕ್ಷಿಗಳಾಗಿ ನಿಲ್ಲುತ್ತೇವೆ. ಇಂದು, ನಾವು ನಮ್ಮ ರಹಸ್ಯವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಾ ಇದ್ದೇವೆ. ನಿಮ್ಮ ಆಶೀರ್ವಾದವನ್ನು ಕೋರುತ್ತೇವೆ’ ಎಂದು ಸುಹಾನಾ ಬರೆದುಕೊಂಡಿದ್ದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...