ಮಕ್ಕಳ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ

Date:

ಜೈಪುರ: ತಂದೆಯೇ ನಾಲ್ಕು ಮಕ್ಕಳನ್ನ ಕತ್ತು ಕೊಯ್ದು ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಬಾಂಸ್ವಾಡ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯ ಬಳಿಕ ತಂದೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಕೇಶ್ (8), ಮಾಂಗಿಲಾಲ್ (6), ವಿಕ್ರಮ್ (4) ಮತ್ತು ಗಣೇಶ್ (2) ಕೊಲೆಯಾದ ಮಕ್ಕಳು. ಕುಶಾಲಗಢ ವ್ಯಾಪ್ತಿಯ ಡೂಂಗಲಾಪಾನಿಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 7.30ಕ್ಕೆ ಮನೆಯ ಮುಂದೆ ಬಾಬುಲಾಲ್ (40) ಶವ ನೇತಾಡುತ್ತಿತ್ತು. ಶವ ನೋಡಿದ ಗ್ರಾಮಸ್ಥರು ಭಯಗೊಂಡು ಮನೆಯೊಳಗೆ ಹೋಗಿ ನೋಡಿದ್ರೆ ಬಾಬುಲಾಲನ ನಾಲ್ಕು ಮಕ್ಕಳ ಕೊಲೆಯಾಗಿತ್ತು.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಎಫ್‍ಎಸ್‍ಎಲ್ ತಂಡದ ಜೊತೆ ಗ್ರಾಮಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳನ್ನ ತಂತಿಯ ರೂಪದ ದಾರದಿಂದ ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಆದ್ರೆ ಮನೆಯಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ಮಕ್ಕಳನ್ನ ಕೊಲೆಗೈದ ಬಳಿಕ ಬಾಬುಲಾಲ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಬಾಬುಲಾಲ್ ಪತ್ನಿ ಕೂಲಿ ಕೆಲಸದ ಹಿನ್ನೆಲೆ ಗುಜರಾತಿನಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೃತ ಬಾಬುಲಾಲ್ ಮದ್ಯದ ದಾಸನಾಗಿದ್ದನು. ಹಾಗಾಗಿ ಪತಿ-ಪತ್ನಿ ನಡುವೆ ಇದೇ ವಿಷಯಕ್ಕೆ ಜಗಳ ನಡೆಯುತ್ತಿತ್ತು. ಕುಡಿತದಿಂದಾಗಿ ಸಾಂಸರಿಕ ಜೀವನವೂ ಹಾಳು ಮಾಡಿಕೊಂಡಿದ್ದನು. ಕೆಲ ದಿನಗಳ ಹಿಂದೆ ಹಲ್ಲೆ ನಡೆಸಿ ಪತ್ನಿಯನ್ನ ಮನೆಯಿಂದ ಹೊರ ಹಾಕಿದ್ದನು. ಕೆಲ ದಿನ ತವರಿನಲ್ಲಿದ್ದ ಬಾಬುಲಾಲ್ ಪತ್ನಿ ನಂತರ ಗುಜರಾತಿನಲ್ಲಿ ಸೇರಿಕೊಂಡಿದ್ದರು.

ಬಾಬುಲಾಲ್ ತಂದೆ ನಿಧನರಾಗಿದ್ದು, ತಾಯಿ ಇವನ ಜೊತೆಯಲ್ಲಿಯೇ ವಾಸವಾಗಿದ್ದರು. ಮಗ ಹಲ್ಲೆ ಮತ್ತು ಕಿರುಕುಳ ನೀಡುತ್ತಿದ್ದ ಹಿನ್ನೆಲೆ ತಾಯಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಾರೆ. ಬಾಬುಲಾಲ್ ಮತ್ತು ಆತನ ಕುಟುಂಬಕ್ಕೆ ಯಾವುದೇ ದ್ವೇಷ ಇರಲಿಲ್ಲ ಎಂದು ಗ್ರಾಮದ ಮುಖಂಡ ಪಾರಸಿಂಗ್ ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...