No menu items!
27 C
Munich
Saturday, May 30, 2026

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳ ಬಲಿ – ಕರ್ಫ್ಯೂ, ಇಂಟರ್ನೆಟ್ ನಿಷೇಧ

Must read

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳ ಬಲಿ – ಕರ್ಫ್ಯೂ, ಇಂಟರ್ನೆಟ್ ನಿಷೇಧ

ಮಣಿಪುರ: ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವು 2023ರ ಮೇ ತಿಂಗಳಿಂದಲೇ ಭೀಕರ ಹಿಂಸಾಚಾರಕ್ಕೆ ಕಾರಣವಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ, ಮನೆಗಳ ಮೇಲೆ ಬಾಂಬ್ ದಾಳಿ ಹಾಗೂ ವಿದ್ಯಾರ್ಥಿಗಳ ಹತ್ಯೆ ಪ್ರಕರಣಗಳು ರಾಜ್ಯದಲ್ಲಿ ತೀವ್ರ ಆತಂಕ ಸೃಷ್ಟಿಸಿವೆ.
2026ರ ಏಪ್ರಿಲ್ನಲ್ಲೂ ಹಿಂಸಾಚಾರ ಮುಂದುವರಿದಿದ್ದು, ವಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಪ್ರದೇಶದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಫಾಲ್ನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮಣಿಪುರದಲ್ಲಿ ಮೀಸಲಾತಿ ಮತ್ತು ಭೂ ಹಕ್ಕುಗಳ ವಿಚಾರವಾಗಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ 2023ರ ಮೇ ತಿಂಗಳಿಂದ ಸಂಘರ್ಷ ತೀವ್ರಗೊಂಡಿದೆ. ಕುಕಿ ಸಮುದಾಯದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗಿ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಘಟನೆಗೆ ಪ್ರಧಾನಿ ಮೋದಿ ಖಂಡನೆ ವ್ಯಕ್ತಪಡಿಸಿದ್ದರು. 2026ರ ಏಪ್ರಿಲ್ 7ರಂದು ನಡೆದ ಬಾಂಬ್ ದಾಳಿಯಲ್ಲಿ 5 ವರ್ಷದ ಬಾಲಕ ಮತ್ತು 6 ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂಫಾಲ್ ಕಣಿವೆಯ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರದ ಭೀತಿಯಿಂದ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕರ್ಫ್ಯೂ ಜಾರಿಯಲ್ಲಿದೆ. ಪ್ರಕರಣ ಸಂಬಂಧ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿ 11 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

- Advertisement -spot_img

More articles

- Advertisement -spot_img

Latest article