ಮತ್ತೆ ಮೋದಿ ಪ್ರಧಾನಿಯಾಗಿದ್ದನ್ನು ಕಂಡು ಬೆಚ್ಚಿಬಿದ್ದ ಪಾತಕಿ ದಾವೂದ್ ಮಾಡಿದ್ದೇನು ಗೊತ್ತೇ..?

Date:

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಿರುವುದರಿಂದ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆದರಿ ಕಂಗಾಲಾಗಿದ್ದಾನೆ.

ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ತನ್ನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಭಯಭೀತನಾಗಿರುವ ದಾವೂದ್ ತನಗೆ ಸೂಕ್ತ ರಕ್ಷಣೆ ನೀಡುವಂತೆ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‍ಐ ಮತ್ತು ಸೇನಾ ಮುಖ್ಯಸ್ಥರಲ್ಲಿ ಮನವಿ ಮಾಡಿದ್ದಾನೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಎನ್‍ಡಿಎ ಸರ್ಕಾರ ಮತ್ತು ಮೋದಿ ಎರಡನೇ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವುದರಿಂದ ತನ್ನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟು ಬೀಳಲಿದೆ ಎಂದು ಹೆದರಿರುವ ದಾವೂದ್ ಕರಾಚಿಯ ಗೌಪ್ಯ ಸ್ಥಳವೊಂದರಲ್ಲಿ ಐಎಸ್‍ಐ ಮತ್ತು ಪಾಕ್ ಸೇನೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತನ್ನ ಆತಂಕವನ್ನು ಹೇಳಿಕೊಂಡಿದ್ದಾನೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಾವೂದ್ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡು ಭಾರತದಲ್ಲಿ ಆತನ ಅಕ್ರಮ, ಅವ್ಯವಹಾರಗಳಿಗೆ ಕೊಡಲಿ ಪೆಟ್ಟು ನೀಡಿತ್ತು. ಅಲ್ಲದೆ, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇದ್ದ ಆತನ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

ಈಗ ಎರಡನೇ ಬಾರಿ ಮೋದಿ ಅಧಿಕಾರಕ್ಕೆ ಬಂದಿರುವುದರಿಂದ ತನ್ನ ವಿರುದ್ಧ ಮತ್ತಷ್ಟು ಉಗ್ರ ಕ್ರಮ ಕೈಗೊಳ್ಳುವುದು ಖಚಿತ ಎಂಬುದು ದಾವೂದ್ ಮನದಟ್ಟಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...