ರಾಯ್ಪುರ: ಮಾಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿತೆ ತರುತ್ತಿವೆ. ಇದೀಗ ಮಹಾರಾಷ್ಟ್ರ ಬಳಿಕ ಛತ್ತೀಸ್ಗಢ ಲಾಕ್ಡೌನ್ ಅಸ್ತ್ರ ಬಳಕೆಗೆ ಮುಂದಾಗಿದೆ. ರಾಯ್ಪುರ ನಗರ ಏಪ್ರಿಲ್ 9 ರಿಂದ 19ರವರೆಗೆ ಲಾಕ್ಡೌನ್ ಆಗಲಿದೆ.
ಮಂಗಳವಾರ ರಾಜ್ಯದಲ್ಲಿ 9,921 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 53 ಜನರು ಸಾವನ್ನಪ್ಪಿದ್ದಾರೆ. ಇದುವರೆಗೂ ಛತ್ತೀಸ್ಗಢನಲ್ಲಿ 3,86,269 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 4,416 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 52,445 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಛತ್ತೀಸ್ಗಢ ರಾಜ್ಯದ ದುರ್ಗನಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ದುರ್ಗ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಾಗಿದ್ದು, ಏಪ್ರಿಲ್ 14ರವರೆಗೆ ಇರಲಿದೆ. ಜನತೆ ಕಡ್ಡಾಯವಾಗಿ ಕೊರೊನಾ ನಿಯಮಗಳು ಪಾಲಿಸಬೇಕು. ಏಪ್ರಿಲ್ 14ರ ಬಳಿಕವೂ ಪರಿಸ್ಥಿತಿ ನಿಯಂತ್ರಣ ಬರದಿದ್ದರೆ ಲಾಕ್ಡೌನ್ ಮುಂದುವರಿಯುವ ಸಾಧ್ಯತೆಗಳಿವೆ ಎಂದು ದುರ್ಗದ ಜಿಲ್ಲಾಧಿಕಾರಿಗಳು ಜನತೆ ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಮಧ್ಯಪ್ರದೇಶ ಸರ್ಕಾರ ಛತ್ತೀಸ್ಗಢದಿಂದ ಬರುವ ಜನರ ಮೇಲೆ ನಿರ್ಬಂಧ ಹೇರಿದ್ದು, ಗಡಿ ಭಾಗಗಳಲ್ಲಿ ಸಿಬ್ಬಂದಿಯನ್ನ ನೇಮಿಸಿದೆ. ಈ ನಿರ್ಬಂಧ ಏಪ್ರಿಲ್ 15ರವರೆಗೆ ಇರಲಿದೆ. ಇದಕ್ಕೂ ಮುನ್ನ ಮಹಾರಾಷ್ಟ್ರದಿಂದ ಆಗಮಿಸುವ ಜನರ ಮೇಲೆ ಮಧ್ಯ ಪ್ರದೇಶ ಸರ್ಕಾರ ನಿರ್ಬಂಧ ವಿಧಿಸಿದೆ. ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಮಧ್ಯ ಪ್ರದೇಶ ಸರ್ಕಾರ ಬಂದ್ ಮಾಡಿಕೊಂಡಿದೆ.
atorvastatin 40mg brand atorvastatin medication buy lipitor 40mg online cheap