ಮದ್ಯಪ್ರಿಯರಿಗೆ ಮತ್ತೆ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ..!

Date:

 

ಬೆಂಗಳೂರು: ಗ್ಯಾರಂಟಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ವರ್ಷದ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಫೆಬ್ರವರಿಯಲ್ಲಿ ಮೊದಲ ಶಾಕ್ ನೀಡಿತ್ತು, ಈಗ ಬಿಯರ್ ಕಂಪನಿಗಳು ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿವೆ..
ಕೆಲವು ದಿನಗಳ ಹಿಂದೆಯಷ್ಟೇ ಇಂಧನದ ಬೆಲೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಜಾಸ್ತಿಯಾಗಿತ್ತು. ಇದಾದ ನಂತರ, ಹಾಲಿನ ಪ್ರಮಾಣವನ್ನು ಹೆಚ್ಚಿಸಿ ಬೆಲೆಯನ್ನು ಜಾಸ್ತಿ ಮಾಡಲಾಗಿತ್ತು. ಈಗ, ಮದ್ಯದ ಬೆಲೆ. ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಜಾಸ್ತಿಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಬಿಯರ್ ಬೆಲೆಯನ್ನು ಏರಿಕೆಯಾಗಿತ್ತು, ಈಗ ಮತ್ತೆ ಬಿಯರ್ ಪ್ರಿಯರಿಗೆ ಬಿಸಿತಟ್ಟಿದೆ. ಕೆಲವೊಂದು ಬ್ರ್ಯಾಂಡ್ ಗಳ ಬೆಲೆ ಕಮ್ಮಿಯಾಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದವರಿಗೆ ಬೆಲೆ ಏರಿಕೆ ಶಾಕ್ ನೀಡಿದೆ.
ಬಿಯರ್ ಬೆಲೆ ಬಾಟಲ್ ವೊಂದಕ್ಕೆ ಆಯಾಯ ಬ್ರ್ಯಾಂಡ್ ಆಧರಿಸಿ ಐದರಿಂದ ಇಪ್ಪತ್ತು ರೂಪಾಯಿವರೆಗೆ ಏರಿಕೆಯಾಗಿದೆ. ಕೆಲವೊಂದು ಕಡೆ, ಕಳೆದ ವಾರದಿಂದಲೇ ಪರಿಷ್ಕೃತ ದರವನ್ನು ಗ್ರಾಹಕರಿಂದ ತೆಗೆದುಕೊಳ್ಳಲಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬರಬಹುದು.

Share post:

Subscribe

spot_imgspot_img

Popular

More like this
Related

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ...