No menu items!
12.1 C
Munich
Saturday, September 12, 2026

ಮದ್ಯ ಹಗರಣ: ಅರವಿಂದ್ ಕೇಜ್ರಿವಾಲ್ʼಗೆ 15 ದಿನ ನ್ಯಾಯಾಂಗ ಬಂಧನ

Must read

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ʼಗೆ 15 ದಿನ ನ್ಯಾಯಾಂಗ ಬಂಧನ ಕೋರ್ಟ್‌ ವಿಧಿಸಿದೆ. ಹೌದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇಡಿ ಇಂದು ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಹಾಜರು ಪಡಿಸಿತು. ಅರ್ಜಿ ವಿಚಾರಣೆ ವೇಳೆ ಇಡಿ ನಮಗೆ ಮುಂದಿನ ವಿಚಾರಣೆ ನಡೆಸುವವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂದು ಮನವಿ ಮಾಡಿತು.
ನಾವು ಹೆಚ್ಚಿನ ರಿಮಾಂಡ್ ಕೇಳುತ್ತಿಲ್ಲ. ಸೆಂಥಿಲ್ ಬಾಲಾಜಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿನ ಪ್ರಕಾರ ಹೆಚ್ಚಿನ ಕಸ್ಟಡಿ ಕೇಳುವ ಹಕ್ಕಿಗೆ ಒಳಪಟ್ಟು ನಾವು ನ್ಯಾಯಾಂಗ ಬಂಧನವನ್ನು ಕೇಳುತ್ತಿದ್ದೇವೆ ಎಂದು ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಮನವಿ ಮಾಡಿದರು.
ಇಡಿ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಕೇಜ್ರಿವಾಲ್‌ಗೆ ಏಪ್ರಿಲ್‌ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತು. ಕಳೆದ ಗುರುವಾರ ಕೋರ್ಟ್‌ ಅರವಿಂದ ಕೇಜ್ರಿವಾಲ್‌ ಅವರನ್ನು 4 ದಿನ ಇಡಿ ಕಸ್ಟಡಿಗೆ ನೀಡಿತ್ತು. ಸದ್ಯ ಇಡಿ ಕಸ್ಟಡಿಯಲ್ಲಿ ಇರುವ ಕೇಜ್ರಿವಾಲ್‌ ಇನ್ನು ಮುಂದೆ ತಿಹಾರ್‌ ಜೈಲಿಗೆ ಶಿಫ್ಟ್‌ ಆಗಲಿದ್ದಾರೆ.

- Advertisement -spot_img

More articles

- Advertisement -spot_img

Latest article