No menu items!
14.8 C
Munich
Thursday, April 30, 2026

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌

Must read

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌

ಚಿತ್ರದುರ್ಗ: 9 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಅಜ್ಜಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿ ಯದ್ವಾತದ್ವ ಹೊಡೆದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದಿತ್ತು. ಈ ಸಂಬಂಧ  ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

ವಿಡಿಯೋ ವೈರಲ್‌ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು. ತಡರಾತ್ರಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ. ಶಿಕ್ಷಕ ವೀರೇಶ್ ಹಿರೇಮಠ್‌ನನ್ನು ಅಮಾನತುಗೊಳಿಸಿ ಚಿತ್ರದುರ್ಗ ಡಿಸಿ ವೆಂಕಟೇಶ್ ಆದೇಶ ಪ್ರಕಟಿಸಿದ್ದಾರೆ.

- Advertisement -spot_img

More articles

- Advertisement -spot_img

Latest article