ಮನೆ ಕಟ್ಟೋರಿಗೆ ಭರ್ಜರಿ ನ್ಯೂಸ್: ಮರಳು ರೇಟ್ ಭಾರೀ ಇಳಿಕೆ

Date:

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ( Cabinet Meeting ) ನಡೆಯಿತು. ಈ ಸಭೆಯಲ್ಲಿ ನೂತನ ಮರಳು ನೀತಿಗೆ ಸಚಿವ ಸಂಪುಟ ಅನುಮೋದಿಸಿದ್ದು, ಈ ಹಿನ್ನಲೆಯಲ್ಲಿ ಇನ್ಮುಂದೆ ಮೆಟ್ರಿಕ್ ಟನ್ ಮರಳು ರೂ.700 ರೂಪಾಯಿಗೆ ಲಭ್ಯವಾಗಲಿದೆ. 

ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲೂ ಮರಳು ಸಿಗಲಿದೆ. ಈ ಮೂಲಕ ಮನೆ ಕಟ್ಟೋರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಬೆಂಗಳೂರಿನ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವಂತ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಮುಕ್ತಾಯಗೊಂಡ ನಂತ್ರ, ಸುದ್ದಿಗೋಷ್ಠಿಯಲ್ಲಿ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳನ್ನು ಸಚಿವ ಜೆಸಿ ಮಾಧುಸ್ವಾಮಿ ನೀಡಿ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಮರಳು ನೀತಿಗೆ ಅವಕಾಶ ನೀಡಲಾಗಿದೆ ಎಂದರು.

ಮುಂದುವರೆದು, ನೂತನ ಮರಳು ನೀತಿಯಂತೆ ಗ್ರಾಮಪಂಚಾಯ್ತಿ ವ್ಯಾಪ್ತಿಗೆ ಅಧಿಕಾರಿ, ಮೆಟ್ರಿಕ್ ಟನ್ ಗೆ 700 ರೂ.ನಂತೆ ಮಾರಾಟ ಮಾಡಲಿದ್ದಾರೆ. ನದಿ ಮರಳಿಗೆ 700 ರೂ ಫಿಕ್ಸ್ ಮಾಡಲಾಗಿದೆ. ಗ್ರಾಮ ಪಂಚಾಯ್ತಿಯವರಿಗೆ ಮರಳು ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಮಾರಾಟದ ಶೇ.25ರಷ್ಟು ಗ್ರಾಮ ಪಂಚಾಯ್ತಿಗೆ ನೀಡಲಾಗುತ್ತದೆ. ಇದನ್ನು ನೋಡಿಕೊಳ್ಳಲು ಅಥಾರಿಟಿ ರಚನೆ ಮಾಡಲಾಗುತ್ತದೆ ಎಂದರು.

ದಕ್ಷಿಣಕನ್ನಡದಲ್ಲಿ ಮರಳು ತೆಗೆಯಲು ಅವಕಾಶ ನೀಡಲಾಗಿದೆ. ಸಾಂಪ್ರದಾಯಿಕ ಮರಳು ತೆಗೆಯಲು ಅವಕಾಶ ನೀಡಲಾಗಿದೆ. ಮೆಷಿನರಿ ಯೂಸ್ ಮಾಡದಂತೆ ಸೂಚನೆ ನೀಡಲಾಗಿದೆ. ಗ್ರಾ.ಪಂ ಪರ್ಮಿಷನ್ ಪಡೆದು ಮರಳು ಪಡೆಯಬಹುದು ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...