ಮಳೆಗಾಲದಲ್ಲಿ ಹೀಗಿರಲಿ ನಿಮ್ಮ ಪಾದದ ರಕ್ಷಣೆ

Date:

ಮಳೆಗಾಲ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲ ಈಗಾಗಲೆ ಶುರುವಾಗಿದೆ. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ತೇವಾಂಶದಿಂದಾಗಿ ಪಾದಗಳು ಹಾಗೂ ಬೆರಳುಗಳ ಮಧ್ಯೆ ಕೊಳೆಯುವ ಸಮಸ್ಯೆ ಕೆಲವರನ್ನು ಕಾಡುತ್ತದೆ. ಮಳೆಗಾಲದಲ್ಲಿ ಕೆಲವೊಂದು ಸರಳ ಟಿಪ್ಸ್ ಅನುಸರಿಸಿ ಕಾಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.

ಮಳೆಗಾಲದಲ್ಲಿ ಕಾಲಿಗೆ ಹೆಚ್ಚಿನ ಆರೈಕೆಯ ಅವಶ್ಯಕತೆ ಇದೆ. ದಿನದಲ್ಲಿ 2-3 ಬಾರಿ ಕಾಲನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಪ್ರತಿಬಾರಿ ಕಾಲು ತೊಳೆದ ನಂತ್ರ ಟವೆಲ್ ನಿಂದ ಕಾಲಿನಲ್ಲಿರುವ ನೀರನ್ನು ಕ್ಲೀನ್ ಮಾಡಿ. ಕಾಲು ತೊಳೆಯುವ ನೀರಿಗೆ ಚಿಟಕಿ ಉಪ್ಪು ಹಾಕುವುದು ಒಳ್ಳೆಯದು.

ಸುಂದರ ಹಾಗೂ ಮೃದು ಕಾಲುಗಳನ್ನು ಪಡೆಯಲು ರಾತ್ರಿ ಮಲಗುವ ಮೊದಲು ಉಗುರು ಬೆಚ್ಚಗಿನ ತೆಂಗಿನ ಎಣ್ಣೆಯನ್ನು ಪಾದಗಳಿಗೆ ಹಚ್ಚಿ ಮಸಾಜ್ ಮಾಡಿ.

ಈ ಋತುವಿನಲ್ಲಿ ಅನೇಕ ಮಹಿಳೆಯರ ಪಾದಗಳು ಬಿರುಕುಬಿಡುತ್ತವೆ. ಅಂತವರು ಪ್ರತಿದಿನ ನಿಂಬೆ ಹಣ್ಣಿನ ಸಿಪ್ಪೆಯನ್ನು ಪಾದದ ಬಿರುಕಿಗೆ ಹಚ್ಚಿಕೊಳ್ಳಿ. ನಿಂಬೆ ರಸವನ್ನು ಉಗುರು ಬೆಚ್ಚಗಿನ ನೀರಿಗೆ ಹಾಕಿ ಅದ್ರಲ್ಲಿ ಪಾದಗಳನ್ನಿಟ್ಟು 20 ನಿಮಿಷ ಹಾಗೆ ಬಿಡಿ. ನಂತ್ರ ಕಾಲನ್ನು ಸ್ವಚ್ಛಗೊಳಿಸಿಕೊಳ್ಳಿ.

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...