ಮಳೆ ಹೊಡೆತಕ್ಕೆ ಕೆರೆಗಳಾದ ಬೆಂಗಳೂರು ರಸ್ತೆಗಳು

Date:

ವಿಜಯದಶಮಿ ದಿನ ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರಂಭವಾದ ಗುಡುಗು ಸಹಿತ ಮಳೆ ಜೋರಾಗಿ ಸುರಿಯುತ್ತಿದ್ದು, ನಗರದ ಹಲವು ರಸ್ತೆಗಳು ಕೆರೆಯಂತಾಗಿದೆ.

ಶುಕ್ರವಾರ ಬೆಳಗ್ಗೆ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನ 1 ಗಂಟೆಗೆ ಮೋಡ ಕವಿದಿದ್ದು, 3 ಗಂಟೆಗೆ ಸುಮಾರಿಗೆ ಗುಡುಗು ಸಹಿತ ಮಳೆ ಆರಂಭವಾಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ನಗರದಲ್ಲಿ ಮಳೆಯಾಗಿದೆ.

 

ಜಯನಗರ, ಹನುಮಂತನಗರ, ಮೆಜೆಸ್ಟಿಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಸೌತ್ ಎಂಡ್ ವೃತ್ತ, ವಿದ್ಯಾಪೀಠ ವೃತ್ತ ಮಂತಾದ ಕಡೆ ಭಾರೀ ಮಳೆಯಾಗಿದೆ. ರಾತ್ರಿ ಸಹ ಮಳೆ ಮುಂದುವರೆಯುವ ಸೂಚನೆ ಇದೆ. ನಗರದಲ್ಲಿ ಸುರಿದ ಮಳೆಯಿಂದಾಗಿ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ವಿಜಯದಶಮಿ ಹಬ್ಬದ ಪ್ರಯುಕ್ತ ರಜೆ ಇದ್ದು, ಅಂಗಡಿ ಪೂಜೆಗಳನ್ನು ಮಾಡಲು ಸಿದ್ಧರಾಗುತ್ತಿದ್ದ ಜನರಿಗೆ ಮಳೆ ಸಂಕಷ್ಟ ತಂದಿದೆ.

ಮಳೆಯಿಂದಾಗಿ ಅನಾಹುತವಾದ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಬಿಬಿಎಂಪಿ ಸಹಾಯವಾಣಿ ಕೇಂದ್ರ ಮಾಹಿತಿ ನೀಡಿದೆ. ಆದರೆ ಮಲ್ಲೇಶ್ವರ ಸಮೀಪದ ಗಾಯತ್ರಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ ಎಂಬ ಮಾಹಿತಿ ಸಿಕ್ಕಿದೆ.

Share post:

Subscribe

spot_imgspot_img

Popular

More like this
Related

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು:...

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...