ಮಸೀದಿ ಮಂದಿರದ ಬಾಗಿಲಲಿ

0
451

ಮಸೀದಿ ಮಂದಿರದ ಬಾಗಿಲಲಿ

ಎತ್ತ ನೋಡಲಿ ಜಗದ ಕತ್ತಲು
ಸುತ್ತಲೂ ಸುತ್ತುತಿಹುದು
ತಿಲಕವಿಟ್ಟವನು ಮಾತಿನ ತಲವಾರು ಹಿಡಿದಿಹನು
ಮೀಸೆ ಇಲ್ಲದ ಗಡ್ಡವು
ಹೊಸ ಪಕ್ಷದ ಪೋಷಾಕು ತೊಟ್ಟಿಹುದು
ಏನಿದೇನಿದು.. ರಣರಂಗವೋ – ಸಂಗದಿ ಸಂಧಿಸಿಹ
ಗುಲಾಮಗಿರಿಯ ಹೋರಾಟವೋ ನಾನರಿಯೆ.
ಚೂರಿ ಇರಿದವ ರಂಗನಾದರೆ
ತುಪಾಕಿ ಹಿಡಿದವ ರಹೀಮನೆಂಬ
ಪಟ್ಟ ಕಟ್ಟಿಹರು ಓ ಕಾವ್ಯದತ್ತ
ಎತ್ತ ಸಾಗುತಿದೆ ಈ ಜಗದ ಚಿತ್ತ
ಶ್ರೀಮಂತನ ಮನೆಯ ಗುದ್ದಲಿ ಪೂಜೆಗೆ
ರಾಮ-ರಹೀಮರ ಬಲಿ ಕೊಡಬೇಕೇ..?
ಹೋರಾಡುವ ಸಮಚಿತ್ತದಿ
ಮಸೀದಿಯ-ದೇಗುಲದ ರಕ್ತ ಒಂದೇ
ಸಂಯುತ್ತವಾಗಿ ಸಮಸ್ಯೆಯ ಶಿಖರವ
ಪುಡಿಗೈಯುವ ವಿಶ್ವಮಾನವತೆಯ
ಮಂತ್ರವ ಬಿಗಿದಪ್ಪುವ.⭐
✍?ದತ್ತರಾಜ್ ಪಡುಕೋಣೆ✍?

LEAVE A REPLY

Please enter your comment!
Please enter your name here