ಆಂಧ್ರಪ್ರದೇಶದಲ್ಲಿ (Rain in Andhra Pradesh ) ಭಾರೀ ಮಳೆಯಾಗುತ್ತಿದ್ದು, ಶುಕ್ರವಾರ ಸುರಿದ ಮಳೆಗೆ ಸುಮಾರು 17 ಜನರು ಮೃತಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶದ ಚಿತ್ತೂರು, ಕಡಪಾ, ಕರ್ನೂಲ್ ಮತ್ತು ಅನಂತಪುರ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈವರೆಗೆ 17 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗುರುವಾರದಿಂದ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.
ನಾಲ್ಕು ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ 100 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಪೊಲೀಸರು, ಅಗ್ನಿಶಾಮಕ ಇಲಾಖೆಯ ತಂಡಗಳಲ್ಲದೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಲು ಸುಮಾರು ಏಳು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್ ಡಿಆರ್ ಎಫ್) ತಂಡಗಳನ್ನು ನಿಯೋಜಿಸಲಾಗಿದೆ.