ಮಹಾರಾಜರಿಗೆ ಗೌರವ ಕೊಡದ ವ್ಯಕ್ತಿ ಇಂದು ಕಾಂಗ್ರೆಸ್ ಅಭ್ಯರ್ಥಿ !

Date:

ಮೈಸೂರು:ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೂರನೇ ಬಾರಿಯೂ ಬಿಜೆಪಿ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಖಚಿತ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು. ಹಿಂದುಳಿದ ವರ್ಗಗಳ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೂರನೇ ಬಾರಿಯೂ ಬಿಜೆಪಿ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಖಚಿತ. ಈಗಾಗಲೇ ನಾವು ಇಲ್ಲಿ ಸತತ ಎರಡು ಬಾರಿ ಗೆದ್ದಿದ್ದೇವೆ ಎಂದು ಹೇಳಿದರು.
ಇನ್ನೂ ಮೈಸೂರು ಸಂಸ್ಥಾನದ ಕೊಡುಗೆ ಸದಾ ನಮ್ಮ ಮುಂದೆ ಇದೆ. ಮೀಸಲಾತಿಯನ್ನು ಸಾಕಷ್ಟು ಕಾಲಗಳ ಹಿಂದೆಯೇ ಜಾರಿಗೆ ತಂದವರು ನಮ್ಮ ಮೈಸೂರಿನ ಮಹಾರಾಜರು. ದೇಶದ 7ನೇ ಮೆಡಿಕಲ್ ಕಾಲೇಜು ಮೈಸೂರಿನಲ್ಲಿದ್ದು 100ನೇ ವರ್ಷ ಪೂರೈಸುತ್ತಿದೆ. ಪ್ರಧಾನಿ ಮೋದಿ ಕೂಡ ಮೈಸೂರಿನ ಮಹಾರಾಜರ ಪರಂಪರೆಗೆ ಅನುಗುಣವಾಗಿ ಮುನ್ನಡೆಯುತ್ತಿದ್ದಾರೆ ಎಂದು ತಿಳಿಸಿದರು.
ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪರ ವಾಗ್ದಾಳಿ ನಡೆಸಿದ ಅವರು, ಮಹಾರಾಜರಿಗೆ ಗೌರವ ಕೊಡದ ವ್ಯಕ್ತಿ ಇಂದು ಕಾಂಗ್ರೆಸ್ ಅಭ್ಯರ್ಥಿ. ಇವರ ವಿರುದ್ಧ ನಾನು ಎರಡು ಕ್ರಿಮಿನಲ್ ಕೇಸ್ಗಳನ್ನು ಹಾಕಿದ್ದೇನೆ ಎಂದರು.

Share post:

Subscribe

spot_imgspot_img

Popular

More like this
Related

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...