ಮಹಾರಾಷ್ಟ್ರದಲ್ಲಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಕೂಟದ ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯ ಬಳಿಕ ನೀಡುತ್ತಿರುವ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಉದ್ದೇಶಪೂರ್ವಕವಾಗಿ ಕೈ ಬಿಡಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಪ್ರಸಾದ್ ಲಾಡ್ ಆರೋಪಿಸಿದ್ದು ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಈ ಬಗ್ಗೆ ಸ್ಪಷ್ಟವಾಗಿ ಹೇಳಿದೆ. ಸರ್ಕಾರಿ ಜಾಹೀರಾತುಗಳಲ್ಲಿ ಕಡ್ಡಾಯವಾಗಿ ಪ್ರಧಾನಮಂತ್ರಿ ಭಾವಚಿತ್ರ ಪ್ರಕಟಿಸಬೇಕು. ಈಗ ಮಹಾರಾಷ್ಟ್ರದ ಎಲ್ಲಾ ಸರ್ಕಾರದ ಜಾಹೀರಾತುಗಳಲ್ಲಿ ಮೋದಿಯವರ ಪೋಟೋ ವನ್ನು ಹಾಕಲಾಗುತ್ತಿದೆ.






