ಮಹೇಂದ್ರ ಸಿಂಗ್ ಧೋನಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಮಲಿಂಗಾ..!

Date:

ಟೀಮ್ ಇಂಡಿಯಾದ ಮಾಜಿ ನಾಯಕ. ಕೂಲ್ ಕ್ಯಾಪ್ಟನ್ ಎಂದೇ ಜನಮನದಲ್ಲಿ ನೆಲೆಸಿರುವ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ. ಭಾರತಕ್ಕೆ 2007ರ ಟಿ20 ವಿಶ್ವಕಪ್ ಹಾಗೂ 2011ರಲ್ಲಿ ಏಕದಿನ ವಿಶ್ವಕಪ್ ತಂದು ಕೊಟ್ಟ ಹೆಮ್ಮೆಯ ನಾಯಕ ಈ ಮಾಹಿ..! ಇಡೀ ವಿಶ್ವ ಕ್ರಿಕೆಟೇ ಧೋನಿಯ ಆಟವನ್ನು ಮೆಚ್ಚಿದೆ. ಧೋನಿ ವಿಶ್ವ ಕ್ರಿಕೆಟ್​ನ ಅದ್ಭುತ ಫಿನಿಶರ್.
ಆದರೆ ಪ್ರಸಕ್ತ ವಿಶ್ವಕಪ್​ನಲ್ಲಿ ಧೋನಿ ಬ್ಯಾಟ್ ಸದ್ದು ಮಾಡ್ತಿಲ್ಲ..! ಟೀಮ್ ಇಂಡಿಯಾ ಏನೋ ಉತ್ತಮ ಪ್ರದರ್ಶನ ತೋರುತ್ತಿದ್ದು, ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ. 3ನೇ ಐಸಿಸಿ ವಿಶ್ವಕಪ್​ ಅನ್ನು ಹೊತ್ತು ತರಲು ರೆಡಿಯಾಗಿದೆ ವಿರಾಟ್ ಪಡೆ…! ಆದರೆ, ಧೋನಿ ಮಾತ್ರ ಫಾರ್ಮ್​ ಕಳೆದುಕೊಂಡು ಬಿಟ್ಟಿದ್ದಾರೆ.


ಧೋನಿ ತಮ್ಮ ಸಾಮರ್ಥ್ಯ, ತಾಕತ್ತಿಗೆ ತಕ್ಕಂತೆ ಆಡುತ್ತಿಲ್ಲ.. ಧೋನಿ ಹೇಳಿಕೊಳ್ಳುವ ಪ್ರದರ್ಶನ ನೀಡುತ್ತಿಲ್ಲ.. ಧೋನಿ ವಿಶ್ವಕಪ್ ನಂತರ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಮಾತುಗಳು, ಟೀಕೆಗಳು ಬರುತ್ತಿವೆ..! ಈ ನಡುವೆ ಶ್ರೀಲಂಕಾ ವೇಗಿ ಲಸಿತ್ ಮಾಲಿಂಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೌದು, ಲಸಿತ್ ‘ನನ್ನ ಪ್ರಕಾರ ಎಂಎಸ್ (ಧೋನಿ) ಇನ್ನೂ ಒಂದು ಅಥವಾ ಎರಡು ವರ್ಷ ಆಡಬೇಕು. ಅವರು ಕಳೆದ 10 ವರ್ಷಗಳಿಂದಲೂ ಬೆಸ್ಟ್ ಫಿನಿಷರ್ ಎಂದು ಹೆಸರುವಾಸಿಯಾದವರು. ಮುಂದೆಯೂ ಈ ವಿಚಾರದಲ್ಲಿ ಅವರನ್ನು ಯಾರೂ ಹಿಂದಿಕ್ಕಲಾರರು ಎಂದು ನನಗನ್ನಿಸುತ್ತಿದೆ. ಪಂದ್ಯದ ಸಂದರ್ಭಗಳನ್ನು ನಿಭಾಯಿಸುವ ಬಗ್ಗೆ ಮುಂಬರುವ ಯುವಕರಿಗೆ ಮಾಹಿ ಮಾರ್ಗದರ್ಶನ ನೀಡಬೇಕು’ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...