ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ನಿಧನ

Date:

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು.
ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡ ಅವರು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು.
ಮೂರು ಬಾರಿ ಶಾಸಕರು, ಮೂರು ಸಲ ಸಂಸದರು, ಒಮ್ಮೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ರಾಜಕೀಯ ಮರು ಹುಟ್ಟು ನೀಡಲು ರಾಜೀನಾಮೆ ನೀಡಿದ್ದರು. ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿ ಸ್ಪರ್ಧೆಗೆ ಚಂದ್ರೇಗೌಡರು ಅವಕಾಶ ಮಾಡಿಕೊಟ್ಟಿದ್ದರು.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...